ನಂದಕುಮಾರ್. ಕೆ. ಎನ್
ಅರುಣಾಚಲ ಪ್ರದೇಶ ಈಗ ಭಾರತದ ಅಂಗವನ್ನಾಗಿಯೇ ನೋಡಲಾಗುತ್ತಿದೆ. ಆದರೆ ಚೀನ ಅದನ್ನು ಈಗಲೂ ಮಾನ್ಯ ಮಾಡಿಲ್ಲ. ಅದರ ಬಗ್ಗೆ ವಿವಾದಗಳು ಈಗಲೂ ಭಾರತ, ಚೀನ ನಡುವೆ ಇವೆ. ಅರುಣಾಚಲ ಪ್ರದೇಶವನ್ನು ಭಾರತದ ಭಾಗವಾಗಿಸುವ ಪ್ರಕ್ರಿಯೆಗಳು ಬ್ರಿಟೀಷ್ ಭಾರತದಲ್ಲೇ ಶುರುವಾಗಿದ್ದವು. ಆದರೆ ಅದಕ್ಕೆ ಅಲ್ಲಿನ ಸ್ಥಳೀಯ ಸ್ವಯಂಮಾಡಳಿತ ಗಣ ವ್ಯವಸ್ಥೆಯ ಬುಡಕಟ್ಟು ಗುಂಪುಗಳು ಪ್ರಬಲವಾದ ಪ್ರತಿರೋಧ ಒಡ್ಡಿದ್ದವು. ಅವರು ಅನುಮತಿಸದೇ ಅವರ ಪ್ರದೇಶದೊಳಕ್ಕೆ ಯಾರೂ ಹೋಗುವಂತಿರಲಿಲ್ಲ. ಹೋದವರು ಜೀವಂತವಾಗಿ ವಾಪಾಸು ಬರಲಾಗುತ್ತಿರಲಿಲ್ಲ. ಬ್ರಿಟೀಷ್ ಅಧಿಕಾರಿಯೊಬ್ಬ ಆ ಪ್ರದೇಶವನ್ನು ಗ್ರಹಿಸಿ ಬ್ರಿಟೀಷ್ ಭಾರತದ ಭಾಗವಾಗಿಸಿಕೊಳ್ಳುವ ಇರಾದೆಯಿಂದ ಯಾವುದೇ ಅನುಮತಿ ಇಲ್ಲದೇ ಅಲ್ಲಿಗೆ ತೆರಳಿ ಸಾವಿಗೀಡಾಗಿದ್ದು ಬ್ರಿಟೀಷ್ ಆಡಳಿತವನ್ನು ಕೆರಳಿಸಿತ್ತು. ಆ ಪ್ರದೇಶವನ್ನು ಕೈವಶ ಮಾಡಿಕೊಳ್ಳುವ ಪ್ರಕ್ರಿಯೆಗಳು ಅಲ್ಲಿಂದ ಚುರುಕುಗೊಂಡವು ಎಂದು ಹೇಳಬಹುದು. ಅಲ್ಲಿ ಸ್ವಾಯತ್ತ ಗಣ ವ್ಯವಸ್ಥೆಯಿರುವ ಬುಡಕಟ್ಟುಗಳು ಸ್ವಯಂಪೂರ್ಣವಾಗಿ ಜೀವನ ಕಟ್ಟಿಕೊಂಡಿದ್ದರೂ ಆ ಪ್ರದೇಶದ ಮೇಲೆ ಚೀನ ಹಾಗೂ ಟಿಬೆಟ್ ನ ಹಿತಾಸಕ್ತಿಗಳೂ ಇದ್ದವು. ಟಿಬೆಟ್ ನಂತರ ಚೀನಾದ ಪ್ರದೇಶವಾಯಿತು. ಇದರ ಮಧ್ಯೆ ಆ ಪ್ರದೇಶದ ಬುಡಕಟ್ಟು ಜನರ ಅಭಿಪ್ರಾಯಗಳಿಗೆ ಯಾವುದೇ ಬೆಲೆ ನೀಡಲಿಲ್ಲ. ಹಾಗಾಗಿ ಆ ಸಮುದಾಯಗಳಲ್ಲಿ ಹಲವು ಈಗಲೂ ಭಾರತವನ್ನೂ ಅಂಗೀಕರಿಸಲಾಗದಂತಹ ಸ್ಥಿತಿಯಲ್ಲಿಯೇ ಇವೆ.
ಅರುಣಾಚಲ ಪ್ರದೇಶ ಈಗ ಭಾರತದ ಅಂಗವನ್ನಾಗಿಯೇ ನೋಡಲಾಗುತ್ತಿದೆ. ಆದರೆ ಚೀನ ಅದನ್ನು ಈಗಲೂ ಮಾನ್ಯ ಮಾಡಿಲ್ಲ. ಅದರ ಬಗ್ಗೆ ವಿವಾದಗಳು ಈಗಲೂ ಭಾರತ, ಚೀನ ನಡುವೆ ಇವೆ. ಅರುಣಾಚಲ ಪ್ರದೇಶವನ್ನು ಭಾರತದ ಭಾಗವಾಗಿಸುವ ಪ್ರಕ್ರಿಯೆಗಳು ಬ್ರಿಟೀಷ್ ಭಾರತದಲ್ಲೇ ಶುರುವಾಗಿದ್ದವು. ಆದರೆ ಅದಕ್ಕೆ ಅಲ್ಲಿನ ಸ್ಥಳೀಯ ಸ್ವಯಂಮಾಡಳಿತ ಗಣ ವ್ಯವಸ್ಥೆಯ ಬುಡಕಟ್ಟು ಗುಂಪುಗಳು ಪ್ರಬಲವಾದ ಪ್ರತಿರೋಧ ಒಡ್ಡಿದ್ದವು. ಅವರು ಅನುಮತಿಸದೇ ಅವರ ಪ್ರದೇಶದೊಳಕ್ಕೆ ಯಾರೂ ಹೋಗುವಂತಿರಲಿಲ್ಲ. ಹೋದವರು ಜೀವಂತವಾಗಿ ವಾಪಾಸು ಬರಲಾಗುತ್ತಿರಲಿಲ್ಲ. ಬ್ರಿಟೀಷ್ ಅಧಿಕಾರಿಯೊಬ್ಬ ಆ ಪ್ರದೇಶವನ್ನು ಗ್ರಹಿಸಿ ಬ್ರಿಟೀಷ್ ಭಾರತದ ಭಾಗವಾಗಿಸಿಕೊಳ್ಳುವ ಇರಾದೆಯಿಂದ ಯಾವುದೇ ಅನುಮತಿ ಇಲ್ಲದೇ ಅಲ್ಲಿಗೆ ತೆರಳಿ ಸಾವಿಗೀಡಾಗಿದ್ದು ಬ್ರಿಟೀಷ್ ಆಡಳಿತವನ್ನು ಕೆರಳಿಸಿತ್ತು. ಆ ಪ್ರದೇಶವನ್ನು ಕೈವಶ ಮಾಡಿಕೊಳ್ಳುವ ಪ್ರಕ್ರಿಯೆಗಳು ಅಲ್ಲಿಂದ ಚುರುಕುಗೊಂಡವು ಎಂದು ಹೇಳಬಹುದು. ಅಲ್ಲಿ ಸ್ವಾಯತ್ತ ಗಣ ವ್ಯವಸ್ಥೆಯಿರುವ ಬುಡಕಟ್ಟುಗಳು ಸ್ವಯಂಪೂರ್ಣವಾಗಿ ಜೀವನ ಕಟ್ಟಿಕೊಂಡಿದ್ದರೂ ಆ ಪ್ರದೇಶದ ಮೇಲೆ ಚೀನ ಹಾಗೂ ಟಿಬೆಟ್ ನ ಹಿತಾಸಕ್ತಿಗಳೂ ಇದ್ದವು. ಟಿಬೆಟ್ ನಂತರ ಚೀನಾದ ಪ್ರದೇಶವಾಯಿತು. ಇದರ ಮಧ್ಯೆ ಆ ಪ್ರದೇಶದ ಬುಡಕಟ್ಟು ಜನರ ಅಭಿಪ್ರಾಯಗಳಿಗೆ ಯಾವುದೇ ಬೆಲೆ ನೀಡಲಿಲ್ಲ. ಹಾಗಾಗಿ ಆ ಸಮುದಾಯಗಳಲ್ಲಿ ಹಲವು ಈಗಲೂ ಭಾರತವನ್ನೂ ಅಂಗೀಕರಿಸಲಾಗದಂತಹ ಸ್ಥಿತಿಯಲ್ಲಿಯೇ ಇವೆ.