ಬಚ್ಚಲುಮನೆಗೆ
ಹೋಗಿ ಲೋಕಿ ಕೈ ಮೂಸಿದ. ಸಿಗರೇಟಿನ ಘಮ ಇನ್ನೂ ಉಳಿದಿತ್ತು! ‘ಛೇ!! ದಿನಾ ಎಲೆ ತೆಗೆದುಕೊಂಡು ಕೈ ಉಜ್ಜಿಕೊಂಡು
ಬರುತ್ತಿದ್ದೆ. ಇವತ್ತು ಮರೆತುಬಿಟ್ಟೆನಲ್ಲ. ಅಷ್ಟಕ್ಕೂ ನಾನು ಸಿಗರೇಟು ಸೇದ್ತೀನಿ ಅನ್ನೋ ಅನುಮಾನ
ಇವರಿಗ್ಯಾಕೆ ಬಂತು? ನಮ್ಮ ನೆಂಟರಿಷ್ಟ್ಯಾರಾದರೂ ನೋಡಿಬಿಟ್ಟರಾ? ಅದೇಗಾದ್ರೂ ತಿಳಿದಿರಲಿ, ಕೊನೇಪಕ್ಷ
ಅಣ್ಣ ಬಯ್ಯಲೂ ಇಲ್ಲವಲ್ಲ. ಏನೂ ಆಗೇ ಇಲ್ಲವೆಂಬಂತೆ ಹೊರಟುಹೋದರು. ನಾನೇ ಹೋಗೆ ತಪ್ಪಾಯ್ತು ಅಂತ ಕೇಳ್ಲಾ?
ಇನ್ನು ಮುಂದೆ ಸೇದಲ್ಲ ಅಣ್ಣ . . .ಸಿಗರೇಟು ಬಿಡಬಲ್ಲೆನಾ?
ಆಗ 31, 2012
ಆಗ 30, 2012
ಪರ್ದಾ ಹಿಂದಿನ ಕತ್ತಲ ಕಥೆ – ‘ಗದ್ದಾಮ’
![]() |
ಗದ್ದಾಮ photo source - sify.com |
ಡಾ ಅಶೋಕ್ ಕೆ ಆರ್
ಕೇರಳದಲ್ಲಿ, ಮಂಗಳೂರಿನಲ್ಲಿ, ಮೈಸೂರಿನ ಬನ್ನಿಮಂಟಪದಲ್ಲಿ ದೊಡ್ಡ ದೊಡ್ಡ ಮನೆಗಳನ್ನು ಕಟ್ಟಿಕೊಂಡಿರುವ ಮುಸ್ಲಿಮರನ್ನು, ಕೆಲವು ಹಿಂದೂಗಳನ್ನು ನೋಡಿದಾಗ ನಮ್ಮ ಮನದಲ್ಲಿ ಮೂಡುವ ಮೊದಲ ಅಭಿಪ್ರಾಯ “ದುಬೈಗ್ ಹೋಗಿ ಚೆನ್ನಾಗಿ ದುಡ್ಕೊಂಡ್ ಬಂದಿದಾನ್ ನೋಡು” ಎಂಬುದೇ ಆಗಿರುತ್ತದೆ. ಸ್ವಲ್ಪಮಟ್ಟಿಗದು ಸತ್ಯವೂ ಹೌದು. ಹೆಚ್ಚು ಹಣ ದುಡಿದ ದೊಡ್ಡ ಮನೆಗಳಿಂದಾಚೆಗೆ ಇರುವ ‘ದುಬೈ ರಿಟರ್ನ್ಡ್’ ಬಡಜನರ ಬವಣೆ ನಮ್ಮ ಕಣ್ಣಿಗೆ ಬೀಳುವುದೇ ಇಲ್ಲ. ಐಷಾರಾಮಕ್ಕಲ್ಲದೆ ಜೀವನೋಪಾಯಕ್ಕಾಗಿ ಮನೆಯ ಆರ್ಥಿಕ ಸಂಕಷ್ಟಗಳ ನಿವಾರಣೆಗಾಗಿ ಸೌದಿ ಅರೇಬಿಯಾದಂಥಹ ದೇಶಗಳಿಗೆ ವಲಸೆ ಹೋಗುವ ಜನರ ಪಡಿಪಾಟಲುಗಳನ್ನು ವಿವರಿಸುವ ಚಿತ್ರವೇ ಮಲಯಾಳಂನ ‘ಗದ್ದಾಮ’ ಅರ್ಥಾತ್ ಮನೆಗೆಲಸದವಳು. ಮನೆಗೆಲಸಕ್ಕೆ ಹೋದ ಹೆಣ್ಣುಮಕ್ಕಳ ನೋವು, ಗಾರೆ ಕೆಲಸ, ಡ್ರೈವರ್ ಕೆಲಸಕ್ಕೆ ಹೋದ ಗಂಡಸರ ಆಕ್ರಂದನವನ್ನು ಎಳೆಎಳೆಯಾಗಿ ಬಿಚ್ಚಿಡುತ್ತದೆ ‘ಗದ್ದಾಮ’. ಇವರ ಸಂಕಷ್ಟಗಳ ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳಗಳಿರುವ ನಾಡಿನ ಅಪವಿತ್ರ ಮನಸ್ಸುಗಳ ಅನಾವರಣವೂ ಆಗುತ್ತದೆ. ಪ್ರವಾದಿ ಹುಟ್ಟಿದ ಓಡಾಡಿದ ನಾಡಿನ ಸೈತಾನರ ಪರಿಚಯ ಮಾಡಿಕೊಡುತ್ತದೆ.
ಕೇರಳದಲ್ಲಿ, ಮಂಗಳೂರಿನಲ್ಲಿ, ಮೈಸೂರಿನ ಬನ್ನಿಮಂಟಪದಲ್ಲಿ ದೊಡ್ಡ ದೊಡ್ಡ ಮನೆಗಳನ್ನು ಕಟ್ಟಿಕೊಂಡಿರುವ ಮುಸ್ಲಿಮರನ್ನು, ಕೆಲವು ಹಿಂದೂಗಳನ್ನು ನೋಡಿದಾಗ ನಮ್ಮ ಮನದಲ್ಲಿ ಮೂಡುವ ಮೊದಲ ಅಭಿಪ್ರಾಯ “ದುಬೈಗ್ ಹೋಗಿ ಚೆನ್ನಾಗಿ ದುಡ್ಕೊಂಡ್ ಬಂದಿದಾನ್ ನೋಡು” ಎಂಬುದೇ ಆಗಿರುತ್ತದೆ. ಸ್ವಲ್ಪಮಟ್ಟಿಗದು ಸತ್ಯವೂ ಹೌದು. ಹೆಚ್ಚು ಹಣ ದುಡಿದ ದೊಡ್ಡ ಮನೆಗಳಿಂದಾಚೆಗೆ ಇರುವ ‘ದುಬೈ ರಿಟರ್ನ್ಡ್’ ಬಡಜನರ ಬವಣೆ ನಮ್ಮ ಕಣ್ಣಿಗೆ ಬೀಳುವುದೇ ಇಲ್ಲ. ಐಷಾರಾಮಕ್ಕಲ್ಲದೆ ಜೀವನೋಪಾಯಕ್ಕಾಗಿ ಮನೆಯ ಆರ್ಥಿಕ ಸಂಕಷ್ಟಗಳ ನಿವಾರಣೆಗಾಗಿ ಸೌದಿ ಅರೇಬಿಯಾದಂಥಹ ದೇಶಗಳಿಗೆ ವಲಸೆ ಹೋಗುವ ಜನರ ಪಡಿಪಾಟಲುಗಳನ್ನು ವಿವರಿಸುವ ಚಿತ್ರವೇ ಮಲಯಾಳಂನ ‘ಗದ್ದಾಮ’ ಅರ್ಥಾತ್ ಮನೆಗೆಲಸದವಳು. ಮನೆಗೆಲಸಕ್ಕೆ ಹೋದ ಹೆಣ್ಣುಮಕ್ಕಳ ನೋವು, ಗಾರೆ ಕೆಲಸ, ಡ್ರೈವರ್ ಕೆಲಸಕ್ಕೆ ಹೋದ ಗಂಡಸರ ಆಕ್ರಂದನವನ್ನು ಎಳೆಎಳೆಯಾಗಿ ಬಿಚ್ಚಿಡುತ್ತದೆ ‘ಗದ್ದಾಮ’. ಇವರ ಸಂಕಷ್ಟಗಳ ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳಗಳಿರುವ ನಾಡಿನ ಅಪವಿತ್ರ ಮನಸ್ಸುಗಳ ಅನಾವರಣವೂ ಆಗುತ್ತದೆ. ಪ್ರವಾದಿ ಹುಟ್ಟಿದ ಓಡಾಡಿದ ನಾಡಿನ ಸೈತಾನರ ಪರಿಚಯ ಮಾಡಿಕೊಡುತ್ತದೆ.
ಆಗ 28, 2012
ಬೆಚ್ಚಿಬೀಳಿಸುವ ವ್ಯಾಸ!
ಡಾ ಅಶೋಕ್. ಕೆ. ಆರ್
ಭೌತಿಕವಾಗಿ ಒಂದು ಊರನ್ನು ಕಟ್ಟುವುದು ಎಷ್ಟು ಕಷ್ಟದ ಕೆಲಸವೋ ಅದಕ್ಕಿಂತಲೂ ಕಷ್ಟದ ಕೆಲಸ ಕಾಲ್ಪನಿಕ ಊರನ್ನು ಕಟ್ಟುವುದು. ಆಂಗ್ಲದಲ್ಲಿ ಬರೆದ ಆರ್.ಕೆ. ನಾರಾಯಣ್ ಮಾಲ್ಗುಡಿ ಎಂಬ ಊರನ್ನು ಅತ್ಯದ್ಬುತವಾಗಿ ಕಟ್ಟಿಕೊಡುತ್ತಾರೆ. ಅವರ ಕಥೆಗಳನ್ನು ಓದಿದ ಕೆಲವರು ಮಾಲ್ಗುಡಿ ಊರನ್ನು ಹುಡುಕಾಡಿದ್ದೂ ಉಂಟಂತೆ. ಕನ್ನಡದಲ್ಲಿ ಒಂದು ಊರನ್ನು ಮನಮುಟ್ಟುವಂತೆ ಕಟ್ಟಿ ಆ ಊರನ್ನೇ ತಮ್ಮ ಕಥೆಗಳಿಗೆ ಯಶಸ್ವಿಯಾಗಿ ಅಳವಡಿಸಿಕೊಂಡಿರುವುದು ಎಂ ವ್ಯಾಸ. ಅವರ ಕಥೆಗಳನ್ನು ಓದುತ್ತಿದ್ದಂತೆ ದುರ್ಗಾಪುರವೆಂಬ, ಅಲ್ಲಿ ಹರಿಯುವ ಶಂಕರೀ ನದಿ, ನದಿಯ ತಿರುವು, ತಿರುವಿನಂಚಿನ ಮನೆ, ಊರಿನ ದೇವಸ್ಥಾನ, ದೇವಸ್ಥಾನದ ರಸ್ತೆ ನಮ್ಮ ಮನಪಟಲದಲ್ಲಿ ಮೂಡಲಾರಂಭಿಸುತ್ತದೆ. ಎರಡನೆಯ ಕಥೆ ಓದುವಷ್ಟರಲ್ಲಿ ದುರ್ಗಾಪುರದ ನಕ್ಷೆ ನಮ್ಮೊಳಗೆ ಸೇರಿಬಿಡುತ್ತದೆ!
ಭೌತಿಕವಾಗಿ ಒಂದು ಊರನ್ನು ಕಟ್ಟುವುದು ಎಷ್ಟು ಕಷ್ಟದ ಕೆಲಸವೋ ಅದಕ್ಕಿಂತಲೂ ಕಷ್ಟದ ಕೆಲಸ ಕಾಲ್ಪನಿಕ ಊರನ್ನು ಕಟ್ಟುವುದು. ಆಂಗ್ಲದಲ್ಲಿ ಬರೆದ ಆರ್.ಕೆ. ನಾರಾಯಣ್ ಮಾಲ್ಗುಡಿ ಎಂಬ ಊರನ್ನು ಅತ್ಯದ್ಬುತವಾಗಿ ಕಟ್ಟಿಕೊಡುತ್ತಾರೆ. ಅವರ ಕಥೆಗಳನ್ನು ಓದಿದ ಕೆಲವರು ಮಾಲ್ಗುಡಿ ಊರನ್ನು ಹುಡುಕಾಡಿದ್ದೂ ಉಂಟಂತೆ. ಕನ್ನಡದಲ್ಲಿ ಒಂದು ಊರನ್ನು ಮನಮುಟ್ಟುವಂತೆ ಕಟ್ಟಿ ಆ ಊರನ್ನೇ ತಮ್ಮ ಕಥೆಗಳಿಗೆ ಯಶಸ್ವಿಯಾಗಿ ಅಳವಡಿಸಿಕೊಂಡಿರುವುದು ಎಂ ವ್ಯಾಸ. ಅವರ ಕಥೆಗಳನ್ನು ಓದುತ್ತಿದ್ದಂತೆ ದುರ್ಗಾಪುರವೆಂಬ, ಅಲ್ಲಿ ಹರಿಯುವ ಶಂಕರೀ ನದಿ, ನದಿಯ ತಿರುವು, ತಿರುವಿನಂಚಿನ ಮನೆ, ಊರಿನ ದೇವಸ್ಥಾನ, ದೇವಸ್ಥಾನದ ರಸ್ತೆ ನಮ್ಮ ಮನಪಟಲದಲ್ಲಿ ಮೂಡಲಾರಂಭಿಸುತ್ತದೆ. ಎರಡನೆಯ ಕಥೆ ಓದುವಷ್ಟರಲ್ಲಿ ದುರ್ಗಾಪುರದ ನಕ್ಷೆ ನಮ್ಮೊಳಗೆ ಸೇರಿಬಿಡುತ್ತದೆ!
ಆಗ 27, 2012
ಚಿನ್ನದ ಬಾಗಿಲಿಗೆ ‘ದೋಷ’ವಿಲ್ಲವೇ?!
![]() |
ಚಿತ್ರಕೃಪೆ - ಇಂಡಿಯಾ ಟುಡೇ |
ಡಾ ಅಶೋಕ್. ಕೆ. ಆರ್
ಕೆಲವು ದಿನಗಳ ಹಿಂದೆ ವಿಜಯ್ ಮಲ್ಯರವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಭತ್ತು ಲಕ್ಷ ಬೆಲೆಬಾಳುವ ಚಿನ್ನದ ಬಾಗಿಲನ್ನು ದಾನವಾಗಿ ನೀಡಿದ್ದಾರೆ. ತಿಂಗಳುಗಳ ಹಿಂದೆ ಅವರು ಹೊತ್ತಿದ್ದ ಹರಕೆಯಂತೆ ಅದು. ಮತ್ತೊಂದು ಬಾಗಿಲನ್ನು ದಾನವಾಗಿ ನೀಡುತ್ತಾರಂತೆ. ಕಿಂಗ್ ಫಿಷರ್ ಏರ್ ಲೈನ್ಸಿನ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡದ ಮಲ್ಯ ಲಕ್ಷಾಂತರ ರುಪಾಯಿಗಳನ್ನು ಹೀಗೆ ‘ದಾನ’ದ ರೂಪದಲ್ಲಿ ಕೊಟ್ಟಿರುವುದು ಕೆಲವರ ಕಣ್ಣು ಕೆಂಪಗಾಗಿಸಿದೆ. ಇದೇ ದುಡ್ಡನ್ನು ಸಮಾಜದ ಕೆಳಸ್ತರದಲ್ಲಿರುವವರಿಗೆ ನೀಡಬಹುದಿತ್ತಲ್ಲ? ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ. ಬಿಡಿ, ಮೊದಲನೆಯದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು, ಎರಡನೆಯದು ಅವರ ಭಕ್ತಿಗೆ ಸಂಬಂಧಿಸಿದ್ದು. ಹರಕೆ ತೀರಿಸುವುದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸುವುದು ಅವರ ಮರ್ಜಿ. ಆದರೆ ಅವರೆಲ್ಲಿದ್ದಾರೆ ಹಿಂದೂ ಧರ್ಮ ‘ರಕ್ಷಕರು’, ಪೇಜಾವರ ಸ್ವಾಮಿಗಳು, ಮುಖ್ಯವಾಗಿ ಅವರೆಲ್ಲಿದ್ದಾರೆ ಆ ದೇವರು?!
ಕೆಲವು ದಿನಗಳ ಹಿಂದೆ ವಿಜಯ್ ಮಲ್ಯರವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಭತ್ತು ಲಕ್ಷ ಬೆಲೆಬಾಳುವ ಚಿನ್ನದ ಬಾಗಿಲನ್ನು ದಾನವಾಗಿ ನೀಡಿದ್ದಾರೆ. ತಿಂಗಳುಗಳ ಹಿಂದೆ ಅವರು ಹೊತ್ತಿದ್ದ ಹರಕೆಯಂತೆ ಅದು. ಮತ್ತೊಂದು ಬಾಗಿಲನ್ನು ದಾನವಾಗಿ ನೀಡುತ್ತಾರಂತೆ. ಕಿಂಗ್ ಫಿಷರ್ ಏರ್ ಲೈನ್ಸಿನ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡದ ಮಲ್ಯ ಲಕ್ಷಾಂತರ ರುಪಾಯಿಗಳನ್ನು ಹೀಗೆ ‘ದಾನ’ದ ರೂಪದಲ್ಲಿ ಕೊಟ್ಟಿರುವುದು ಕೆಲವರ ಕಣ್ಣು ಕೆಂಪಗಾಗಿಸಿದೆ. ಇದೇ ದುಡ್ಡನ್ನು ಸಮಾಜದ ಕೆಳಸ್ತರದಲ್ಲಿರುವವರಿಗೆ ನೀಡಬಹುದಿತ್ತಲ್ಲ? ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ. ಬಿಡಿ, ಮೊದಲನೆಯದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು, ಎರಡನೆಯದು ಅವರ ಭಕ್ತಿಗೆ ಸಂಬಂಧಿಸಿದ್ದು. ಹರಕೆ ತೀರಿಸುವುದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸುವುದು ಅವರ ಮರ್ಜಿ. ಆದರೆ ಅವರೆಲ್ಲಿದ್ದಾರೆ ಹಿಂದೂ ಧರ್ಮ ‘ರಕ್ಷಕರು’, ಪೇಜಾವರ ಸ್ವಾಮಿಗಳು, ಮುಖ್ಯವಾಗಿ ಅವರೆಲ್ಲಿದ್ದಾರೆ ಆ ದೇವರು?!
ಆಗ 24, 2012
ಆದರ್ಶವೇ ಬೆನ್ನು ಹತ್ತಿ . . . ಭಾಗ 4
ಆದರ್ಶವೇ ಬೆನ್ನು ಹತ್ತಿ . . . ಭಾಗ 3
“ಹೋಟೆಲ್ಲಿನಲ್ಲಿ
ನಡೆದಿದ್ದರ ಬಗ್ಗೆ ಚಿಂತಿಸುತ್ತಿದ್ದೀರ. ಆ ವಿಷಯವನ್ನು ನಾನು ಯಾರಿಗೂ ಹೇಳೋದಿಲ್ಲ. ಚಿಂತೆ ಬೇಡ”
“ನಿಮಗೇನಾದರೂ
ಫೇಸ್ ರೀಡಿಂಗ್ ಬರುತ್ತಾ?”
‘ಇದೇ ಪ್ರಶ್ನೆ
ಸ್ವಲ್ಪ ಸಮಯದ ಮೊದಲು ನನ್ನ ಮನಸ್ಸಿಗೂ ಬಂದಿತ್ತಲ್ಲ’ ಎಂದು ಅಚ್ಚರಿಗೊಳ್ಳುತ್ತ “ಇಲ್ಲ” ಎಂದ. ಅಷ್ಟರಲ್ಲಿ
ಸಯ್ಯದ್ ಒಳಬಂದ. “ಏನ್ ಇನ್ನೂ ಏನು ಆರ್ಡರ್ರೇ ಮಾಡಿಲ್ಲ” ಎಂದ್ಹೇಳಿ ಮಾಣಿಯನ್ನು ಕರೆದು ತಿಂಡಿ ಹೇಳಿದ.
ತಿಂಡಿ ತಿಂದಾದ ಮೇಲೆ “ಸರಿ ಲೋಕಿ. ಒಂದಷ್ಟು ಕೆಲಸವಿದೆ. ನಾಳೆ ಭೇಟಿಯಾಗೋಣ” ಎಂದ್ಹೇಳಿ ಸಯ್ಯದ್ ಮೇಲೆದ್ದ.
“ಬರ್ತೀನಿ ಲೋಕೇಶ್” ರೂಪಾ ಕೂಡ ಹೊರಡಲನುವಾದಳು. ‘ದಯಮಾಡಿ ಹೇಳಬೇಡ’ ಅನ್ನೋ ಬೇಡಿಕೆಯಿತ್ತಾ?! ಛೇ!
ನಿಜಕ್ಕೂ ನನಗೆ ಫೇಸ್ ರೀಡಿಂಗ್ ಬರುವಂತಿದ್ದರೆ. .
ಆಗ 23, 2012
ತೀವ್ರವಾದದ ನಡುವೆ ಸೊರಗುತ್ತಿರುವ ಮನುಷ್ಯ ಧರ್ಮ
ಡಾ ಅಶೋಕ್. ಕೆ. ಆರ್.
ಇತ್ತೀಚೆಗಷ್ಟೇ ಸುಳ್ಯ ಮತ್ತು ಪುತ್ತೂರಿನ ಸುತ್ತಮುತ್ತ ವಾಸಿಸುತ್ತಿರುವ ನಿರಾಶ್ರಿತ ಶ್ರೀಲಂಕಾ ತಮಿಳರು ಪಡಿತರ ಚೀಟಿಯನ್ನು ವಿತರಿಸಬೇಕೆಂದು ಪ್ರತಿಭಟಿಸಿದರು. ಟಿಬೆಟ್ಟಿನಲ್ಲಿ ಚೀನಾ ದೇಶದ ಶೋಷಣೆಯನ್ನು ಖಂಡಿಸಿ ಕೆಲವು ತಿಂಗಳುಗಳ ಹಿಂದೆ ಟಿಬೆಟ್ಟಿಯನ್ನರು ಭಾರತದ ವಿವಿದೆಡೆ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೂ ತಿರುಗಿತ್ತು. ನೇಪಾಳಿಗರ ವಲಸೆ ನಿರಂತರವಾಗಿ ನಡೆಯುತ್ತದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಮಾನವ ಹಕ್ಕು ಆಯೋಗದ ವರದಿಯಂತೆ ಕಳೆದ ಮೂರು ವರ್ಷದಲ್ಲಿ ಮೂರು ಸಾವಿರಕ್ಕೂ ಅಧಿಕ ಹಿಂದೂ ಪಾಕಿಗಳು ಭಾರತಕ್ಕೆ ವಲಸೆ ಬಂದಿದ್ದಾರೆ. ಈ ವಲಸೆಗಳ ಬಗ್ಗೆ ಇಲ್ಲದ ಆಕ್ರೋಶ ಬಾಂಗ್ಲಾ ವಲಸಿಗರ ಮೇಲೆ ಮಾತ್ರ ಯಾಕೆ? ಬಾಂಗ್ಲಾ ವಲಸಿಗರು ಸ್ಥಳೀಯ ಬೋಡೋ ಆದಿವಾಸಿಗಳ ಮೇಲೆ ನಡೆಸಿರುವ ಕ್ರೌರ್ಯವಷ್ಟೇ ಇದಕ್ಕೆ ಕಾರಣವಾ? ಆಶ್ರಯನೀಡಿದ ದೇಶಕ್ಕೆ ಅವರು ದ್ರೋಹಬಗೆಯುತ್ತಿದ್ದಾರೆಂಬ ಅಸಹನೆಯಾ? ಆಶ್ರಯ ನೀಡಿದ ದೇಶದ ಪ್ರಧಾನಮಂತ್ರಿಯನ್ನೇ ಕೊಂದ ಜನರ ವಿರುದ್ಧ ‘ದೇಶಭಕ್ತಿಯ’ ಹೆಸರಿನಲ್ಲಿ ಕೂಗಾಡದ ಮಂದಿ ಬಾಂಗ್ಲಾ ವಲಸಿಗರ ವಿರುದ್ಧ ಪ್ರತಿಭಟನೆಯ ಅಸ್ತ್ರ ಝಳಪಿಸುತ್ತಿರುವುದ್ಯಾಕೆ? ಬಾಂಗ್ಲಾ ವಲಸಿಗರು ಮುಸಲ್ಮಾನರೆಂಬ ಕಾರಣಕ್ಕೆ ಬಿಜೆಪಿ, ಆರೆಸ್ಸೆಸ್, ಶ್ರೀರಾಮ ಸೇನೆಯಂಥ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಗುಲ್ಲೆಬ್ಬಿಸುತ್ತಿದ್ದಾರಾ?
ಇತ್ತೀಚೆಗಷ್ಟೇ ಸುಳ್ಯ ಮತ್ತು ಪುತ್ತೂರಿನ ಸುತ್ತಮುತ್ತ ವಾಸಿಸುತ್ತಿರುವ ನಿರಾಶ್ರಿತ ಶ್ರೀಲಂಕಾ ತಮಿಳರು ಪಡಿತರ ಚೀಟಿಯನ್ನು ವಿತರಿಸಬೇಕೆಂದು ಪ್ರತಿಭಟಿಸಿದರು. ಟಿಬೆಟ್ಟಿನಲ್ಲಿ ಚೀನಾ ದೇಶದ ಶೋಷಣೆಯನ್ನು ಖಂಡಿಸಿ ಕೆಲವು ತಿಂಗಳುಗಳ ಹಿಂದೆ ಟಿಬೆಟ್ಟಿಯನ್ನರು ಭಾರತದ ವಿವಿದೆಡೆ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೂ ತಿರುಗಿತ್ತು. ನೇಪಾಳಿಗರ ವಲಸೆ ನಿರಂತರವಾಗಿ ನಡೆಯುತ್ತದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಮಾನವ ಹಕ್ಕು ಆಯೋಗದ ವರದಿಯಂತೆ ಕಳೆದ ಮೂರು ವರ್ಷದಲ್ಲಿ ಮೂರು ಸಾವಿರಕ್ಕೂ ಅಧಿಕ ಹಿಂದೂ ಪಾಕಿಗಳು ಭಾರತಕ್ಕೆ ವಲಸೆ ಬಂದಿದ್ದಾರೆ. ಈ ವಲಸೆಗಳ ಬಗ್ಗೆ ಇಲ್ಲದ ಆಕ್ರೋಶ ಬಾಂಗ್ಲಾ ವಲಸಿಗರ ಮೇಲೆ ಮಾತ್ರ ಯಾಕೆ? ಬಾಂಗ್ಲಾ ವಲಸಿಗರು ಸ್ಥಳೀಯ ಬೋಡೋ ಆದಿವಾಸಿಗಳ ಮೇಲೆ ನಡೆಸಿರುವ ಕ್ರೌರ್ಯವಷ್ಟೇ ಇದಕ್ಕೆ ಕಾರಣವಾ? ಆಶ್ರಯನೀಡಿದ ದೇಶಕ್ಕೆ ಅವರು ದ್ರೋಹಬಗೆಯುತ್ತಿದ್ದಾರೆಂಬ ಅಸಹನೆಯಾ? ಆಶ್ರಯ ನೀಡಿದ ದೇಶದ ಪ್ರಧಾನಮಂತ್ರಿಯನ್ನೇ ಕೊಂದ ಜನರ ವಿರುದ್ಧ ‘ದೇಶಭಕ್ತಿಯ’ ಹೆಸರಿನಲ್ಲಿ ಕೂಗಾಡದ ಮಂದಿ ಬಾಂಗ್ಲಾ ವಲಸಿಗರ ವಿರುದ್ಧ ಪ್ರತಿಭಟನೆಯ ಅಸ್ತ್ರ ಝಳಪಿಸುತ್ತಿರುವುದ್ಯಾಕೆ? ಬಾಂಗ್ಲಾ ವಲಸಿಗರು ಮುಸಲ್ಮಾನರೆಂಬ ಕಾರಣಕ್ಕೆ ಬಿಜೆಪಿ, ಆರೆಸ್ಸೆಸ್, ಶ್ರೀರಾಮ ಸೇನೆಯಂಥ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಗುಲ್ಲೆಬ್ಬಿಸುತ್ತಿದ್ದಾರಾ?
ಆಗ 19, 2012
ಆದರ್ಶವೇ ಬೆನ್ನು ಹತ್ತಿ . . . ಭಾಗ 3
ಮಹಾರಾಜ ಪದವಿ
ಪೂರ್ವ ಕಾಲೇಜಿನ ಆವರಣದಲ್ಲಿರುವ ಬ್ಯಾಸ್ಕೆಟ್ ಬಾಲ್ ಮೈದಾನದಲ್ಲಿ ಸಂಜೆಯ ವೇಳೆ ಹತ್ತಾರು ಚಿಕ್ಕ ಚಿಕ್ಕ
ಮಕ್ಕಳು ಸ್ಕೇಟಿಂಗ್ ಅಭ್ಯಾಸದಲ್ಲಿ ನಿರತರಾಗಿರುತ್ತಾರೆ. ಜೊತೆಯಲ್ಲಿ ಅವರ ಮನೆಯ ಹಿರಿಯರೊಬ್ಬರು.
ಲೋಕಿಗೆ ಬೇಸರವಾದಾಗಲೆಲ್ಲ ಇಲ್ಲಿಗೆ ಬಂದು ಕಲ್ಲು ಬೆಂಚಿನ ಮೇಲೆ ಕೂರುತ್ತಿದ್ದ. ಹೊಸಬರು ಸ್ಕೇಟಿಂಗ್
ಕಲಿಯುವ ರೀತಿ, ಹಳಬರು ಹೊಸ ಹುಡುಗರ ಮುಂದೆ ತಮಗೆ ಎಲ್ಲಾ ಗೊತ್ತು ಎಂಬಂತೆ ಮಾಡುತ್ತಿದ್ದ ಮುಖಭಾವವನ್ನು
ನೋಡಿದರೆ ಮನಸ್ಸಿಗೆಷ್ಟೋ ಸಮಾಧಾನವಾಗುತ್ತಿತ್ತು. ಅಂದು ಕೂಡ ಲೋಕಿ ಅಲ್ಲಿ ಬಂದು ಕುಳಿತಿದ್ದ. ಸಯ್ಯದ್
ಈತನನ್ನು ಕಂಡು ಬಳಿಗೆ ಬಂದ.
ಆಗ 10, 2012
ಬ್ರಹ್ಮಚಾರಿ

ಕಥೆಯ ಆರಂಭಕ್ಕೂ ಮುಂಚೆ ಒಂದು Disclaimer! – ಈ ಕಥೆಯಲ್ಲಿ ಉಪಯೋಗಿಸಿರುವ ಜಾತಿ ಧರ್ಮದ ಹೆಸರುಗಳು ಕೇವಲ ಸಾಂಕೇತಿಕ. ಒಂದು ಜಾತಿಯ ಬದಲಿಗೆ ಮತ್ತೊಂದು ಜಾತಿಯ ಹೆಸರು ಬರೆದಾಗ್ಯೂ ಈ ಕಥೆಯ ಪ್ರಸ್ತುತತೆಗೆ ಧಕ್ಕೆಯಾಗುವುದಿಲ್ಲವೆಂಬುದು ನಮ್ಮ ಇವತ್ತಿನ ಸಮಾಜದ ದುರಂತ ಮತ್ತು ನಮ್ಮೆಲ್ಲರ ವೈಯಕ್ತಿಕ ವೈಫಲ್ಯ. ಈ ಕೆಳಗೆ ಹೆಸರಿಸಿರುವ ಯಾವುದಾದರೂ ಜಾತಿ ಧರ್ಮದವರು ನೀವಾಗಿದ್ದ ಪಕ್ಷದಲ್ಲಿ ಕಥೆ ಓದಿ ಮುಗಿಸಿದ ನಂತರ ನಿಮ್ಮಲ್ಲಿ ಖುಷಿ ಅಥವಾ ಕೋಪದ ಭಾವನೆ ಮೂಡಿದರೆ ಅದು ನಿಮ್ಮ ಕಲ್ಮಶ ಮನಸ್ಸಿನ ಸಂಕೇತ!
ಆಗ 9, 2012
ಆದರ್ಶವೇ ಬೆನ್ನು ಹತ್ತಿ....ಭಾಗ 2
“ಹಬ್ಬದ ದಿನ
ಏನೇನೋ ಹೇಳಿ ನಿನ್ನ ಮನಸ್ಸಿಗೆ ಬೇಸರ ಉಂಟುಮಾಡುವ ಇಚ್ಛೆ ನನಗಿಲ್ಲ. ಮತ್ತೊಮ್ಮೆ ಹೇಳ್ತೀನಿ” ನಗುತ್ತಾ
ಉತ್ತರಿಸಿ ಹೊರಟುಹೋದ.
ಗಣೇಶ ಚತುರ್ಥಿಯಾಗಿ
ಒಂದು ವಾರ ಕಳೆದ ನಂತರ ಲೋಕಿಯ ಹುಟ್ಟುಹಬ್ಬ. ಪಿ.ಯು.ಸಿಗೆ ಬಂದ ನಂತರ ಸ್ನೇಹಿತರಿಗೆ ಪಾರ್ಟಿ ಕೊಡಿಸುವ
ನೆಪದಲ್ಲಿ ಮನೆಯಲ್ಲಿ ಹಣ ಪಡೆದುಕೊಂಡು ನೂರು ರುಪಾಯಿಗೆ ಒಂದು ಪುಸ್ತಕ, ಸಾಮಾನ್ಯವಾಗಿ ಸ್ವಾತಂತ್ರ್ಯ
ಹೋರಾಟಗಾರರ ಬಗೆಗಿನ ಪುಸ್ತಕವನ್ನು ಖರೀದಿಸುತ್ತಿದ್ದ. ಮಿಕ್ಕ ದುಡ್ಡನ್ನು ಭಿಕ್ಷುಕರಿಗೆ ಕೊಟ್ಟುಬಿಡುತ್ತಿದ್ದ.
ಇಂದ್ಯಾಕೋ ಹಣ ಕೊಡುವುದು ಬೇಡ, ಹೋಟೆಲ್ಲಿಗೆ ಕರೆದೊಯ್ದು ಊಟ ಕೊಡಿಸೋಣ ಎಂದೆನಿಸಿತು. ಇದೇ ಯೋಚನೆಯಲ್ಲಿ
ಸಯ್ಯಾಜಿರಾವ್ ರಸ್ತೆಯಲ್ಲಿ ನಡೆಯುತ್ತಿದ್ದವನಿಗೆ ಇಂದ್ರ ಭವನ್ ಹೋಟೆಲ್ ಎದುರಿಗೆ ಒಬ್ಬ ವ್ಯಕ್ತಿ
ಭಿಕ್ಷೆ ಬೇಡುತ್ತಿರುವುದು ಕಂಡಿತು. ಆತನಿಗೆ ಎರಡೂ ಕಾಲುಗಳಿರಲಿಲ್ಲ. ಎಡಗೈ ಇರಲಿಲ್ಲ. ಅವನ ಹತ್ತಿರ
ಹೋಗಿ “ಏನಾದರೂ ತಿಂತೀರಾ?” ಅಂದ. “ದುಡ್ಡೇ ಇಲ್ಲ ಸಾಮಿ” ಅವನ ಮಾತು ಕೇಳಿ ಲೋಕಿಗೆ ‘ಸಮಾನತೆ ಅನ್ನೋದು
ಕೈಗೆಟುಕದ ನಕ್ಷತ್ರದಂತೆಯೇ ಉಳಿದುಹೋಗುತ್ತದಾ?’ ಎಂಬ ಯೋಚನೆ ಬಂತು. ಯೋಚನೆಗಳನ್ನು ಹತ್ತಿಕ್ಕುತ್ತಾ
“ನಾನು ಕೊಡಿಸ್ತೀನಿ ನಡೀರಿ” ಎಂದ್ಹೇಳಿ ಆತನ ಮಾತಿಗೂ ಕಾಯದೆ ಅವನನ್ನು ಅನಾಮತ್ ಮೇಲೆತ್ತಿಕೊಂಡು ಇಂದ್ರ
ಭವನದ ಒಳಗೆ ಹೋದ. ಸುತ್ತಲಿನವರ ಗಮನ ಲೋಕಿಯ ಮೇಲಿತ್ತು.