ಆಗ 29, 2014

Aarambha Songs

Download all songs in zip click here
Adda.mp3
Hadi Hadi.mp3
Iduvarege iddilla.mp3
Swarga Nisarga.mp3
ಎಸ್ ಅಭಿ ಹನಕೆರೆ ನಿರ್ದೇಶಿಸುತ್ತಿರುವ ಆರಂಭ - The Last Chance ಚಿತ್ರದ ಎಲ್ಲಾ ನಾಲ್ಕೂ ಹಾಡುಗಳು ಇಂದಿನಿಂದ ಉಚಿತವಾಗಿ ಲಭ್ಯ. ಶರ ಪ್ರೊಡಕ್ಷನ್ ಲಾಂಛನದಲ್ಲಿ ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸುತ್ತಿರುವ ಚಿತ್ರಕ್ಕೆ ಸಂಗೀತ ನೀಡಿರುವುದು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್. ಗುರುಕಿರಣ್, ಗೋಟೂರಿ, ವಿ.ಮನೋಹರ್, ಅಭಿ ಹನಕೆರೆ, ಕವಿರಾಜ್ ಬರೆದಿರುವ ಹಾಡುಗಳಿಗೆ ಧ್ವನಿಯಾಗಿರುವುದು ಗುರುಕಿರಣ್, ಮುರುಳಿ ಮೋಹನ್, ಗುರುರಾಜ್ ಹೊಸ್ಕೋಟೆ, ಮಾಲ್ಗುಡಿ ಶುಭ.
"ಇದುವರೆಗೆ ಇದ್ದಿಲ್ಲ........................ಲವ್ ಮೂಡಿತಣ್ಣ" (ಈ ಹಾಡು ಈ ವರ್ಷದ ಹಿಟ್ ಸಾಲಿಗೆ ಸೇರುವುದರಲ್ಲಿ ನನಗಂತೂ ಸಂಶಯವಿಲ್ಲ - ಸಂ)
"ಹಾಡಿ ಹಾಡಿ ರೇಡಿಯೋಗೆ ಬೋರು ಆಗೋದಿಲ್ಲ"

ಮನೆಮುರಿಯೋ ಐಡಿಯಾಗಳು ಎಲ್ಲಿ ಸಿಗುತ್ತೆ ಗೊತ್ತಾ? ಈ ಹಾಡು ಕೇಳಿ

"ಸ್ವರ್ಗ ನಿಸರ್ಗ"
Summary - Aarambha - The Last Chance, Kannada movie audio released. Songs are available for free download. Music by Gurukiran. Produced by D Ganesh V Nagenahalli

ಆಗ 28, 2014

ಅತಿ ಶೀಘ್ರದಲ್ಲಿ ಸಂಗೀತದ "ಆರಂಭ"

aarambha
"ಆರಂಭ"
ಹೊಸಬರ ತಂಡವನ್ನು ಕಟ್ಟಿ ಚಿತ್ರ ನಿರ್ಮಿಸುವುದು ಕಷ್ಟಕರವಾದ ಕೆಲಸ. ಹೊಸತೇನನ್ನಾದರೂ ಕೊಡಲೇಬೇಕೆಂಬ ತುಡಿತದಿಂದ ಬಹುತೇಕ ಹೊಸಬರನ್ನೇ ಸೇರಿಸಿ ರೂಪಿಸಿ "ಆರಂಭ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಸ್. ಅಭಿ ಹನಕೆರೆ. ಚಿತ್ರ ಶೂಟಿಂಗ್ ಮುಗಿಸಿ ಈಗ ಡಬ್ಬಿಂಗಿನ ಕೊನೆಯ ಹಂತದಲ್ಲಿದೆ. ಚಿತ್ರದ ಹಾಡುಗಳನ್ನು ಶೀಘ್ರದಲ್ಲೇ ಜನರ ಮುಂದಿಡುವುದಾಗಿ ಚಿತ್ರ ತಂಡ ತಿಳಿಸಿದೆ. 
ಹೊಸಬರ ಚಿತ್ರಕ್ಕೆ ಸಂಪೂರ್ಣ ಸಹಕಾರ ನೀಡಿ ಸಂಗೀತ ನೀಡಿರುವುದು ಹೊಸಬರಿಗೆ ಹೊಸ ಆಲೋಚನೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹಿಸುತ್ತ ಬಂದಿರುವ ಗುರುಕಿರಣ್. ಗುರುಕಿರಣ್, ಅಭಿ ಹನಕೆರೆ, ವಿ.ಮನೋಹರ್, ಗೊಟೂರಿ ಮತ್ತು ಕವಿರಾಜ್ ರಚಿಸಿರುವ ಸಾಹಿತ್ಯಕ್ಕೆ ದನಿ ನೀಡಿರುವವರು ಮುರುಳಿ ಮೋಹನ್, ಗುರುರಾಜ್ ಹೊಸಕೋಟೆ, ಮಾಲ್ಗುಡಿ ಶುಭ ಮತ್ತು ಗುರುಕಿರಣ್.

ಆಗ 27, 2014

ಆದರ್ಶವೇ ಬೆನ್ನು ಹತ್ತಿ .... ಕೊನೆಯ ಕಂತು.



ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 37 ಓದಲು ಇಲ್ಲಿ ಕ್ಲಿಕ್ಕಿಸಿ
ಉಳಿದ ಸದಸ್ಯರು ಪೋಲೀಸರು ಅಲ್ಲಿ ಕುಳಿತು ತಮ್ಮ ಪೊಸಿಷನ್ ತೆಗೆದುಕೊಳ್ಳುವಷ್ಟರಲ್ಲಿ ಹೊರಟು ಹೋಗಿದ್ದರು. ಕೈಯಲ್ಲಿಡಿದಿದ್ದ ಟಾರ್ಚಿನ ಬೆಳಕೇ ನಮಗೆ ಶತ್ರುವಾಗಿತ್ತು. ಅವರಿಗೆ ತೀರ ಸಮೀಪಕ್ಕೆ ಬರುವವರೆಗೂ ಸುಮ್ಮನಿದ್ದರು. ಅವರ ಹತ್ತಿರಕ್ಕೆ ಬರುತ್ತಿದ್ದಂತೆ ಪೋಲೀಸರಿಗೆ ಪ್ರೇಮ್ ನ ಹೆಗಲಿನಲ್ಲಿದ್ದ ಎ.ಕೆ.47 ಬಂದೂಕು ಕಾಣಿಸಿತು. “ಫೈರ್” ಪೋಲೀಸನೊಬ್ಬ ಕೂಗಿ ಮುಗಿಸುವಷ್ಟರಲ್ಲಿ ಪೋಲೀಸರು ಹಾರಿಸಿದ ಗುಂಡು ಪ್ರೇಮ್ ನ ಹಣೆ ಹೊಕ್ಕಿತು. ಒಂದು ಸಣ್ಣ ಕಿರುಚಾಟವನ್ನು ಮಾಡಿ ನೆಲಕ್ಕುರುಳಿದರು ಕಾ.ಪ್ರೇಮ್.

ಆಗ 25, 2014

ಇತಿಹಾಸವನ್ನರಸುತ್ತ.....


Saketh Rajan
Making History

ಡಾ. ಅಶೋಕ್. ಕೆ. ಆರ್.
ಇತಿಹಾಸವೆಂದರೆ ಏನು? ಶಾಲೆಯಲ್ಲಿ ಸಮಾಜ ವಿಜ್ಞಾನವೆಂದರೆ ಆಸಕ್ತಿಯೇ ಮೂಡಿಸದ ಪಾಠಗಳ ಸರಮಾಲೆ. ಜಿಯೋಗ್ರಫಿಯಲ್ಲಿ ಮ್ಯಾಪುಗಳನ್ನು ಬರೆಬರೆದು ಅಭ್ಯಸಿಸಿ, ಸಿವಿಕ್ಸಿನಲ್ಲಿ ಅರ್ಥವಾಗದ್ದನ್ನೆಲ್ಲಾ ಉರು ಹೊಡೆದು ಇತಿಹಾಸದ ಪುಸ್ತಕ ಮುಟ್ಟುವಷ್ಟರಲ್ಲಿ ಸುಸ್ತೋ ಸುಸ್ತು! ಆ ಇತಿಹಾಸದ ಪುಸ್ತಕದಲ್ಲಾದರೂ ಏನಿರುತ್ತಿತ್ತು? ಒಂದಾದ ಮೇಲೊಂದರಂತೆ ಅಸಂಖ್ಯ ಇಸವಿಗಳು. ಇಂತಿಪ್ಪ ಇಸವಿಯಲ್ಲಿ ಇಂತಿಪ್ಪ ಜಾಗದಲ್ಲಿ ಇಂತೀರ್ವ ರಾಜರು ಕಾದಾಡಿ ಇಂತಿಪ್ಪ ರಾಜ ಗೆದ್ದು ಅಂತಿಪ್ಪ ರಾಜ ಸೋತೋ – ಸತ್ತೋ ಯುದ್ಧ ಮುಗಿಯುವುದೇ ಇತಿಹಾಸ. ಸದ್ಯ ಹತ್ತನೇ ತರಗತಿಗೆ ಆ ಪಠ್ಯದ ಇತಿಹಾಸದಿಂದ ಮುಕ್ತನಾದೆ!

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ

hingyake
ಬಿಜೆಪಿಯ ಶ್ರೀರಾಮುಲು, ಬಿ.ಎಸ್.ಯಡಿಯೂರಪ್ಪ ಮತ್ತು ಕಾಂಗ್ರೆಸ್ಸಿನ ಪ್ರಕಾಶ್ ಹುಕ್ಕೇರಿ ಲೋಕಸಭಾ ಚುನಾವಣೆಯಲ್ಲಿ ಜಯಿಸಿದ್ದ ಕಾರಣ ಬಳ್ಳಾರಿ ಗ್ರಾಮಾಂತರ, ಚಿಕ್ಕೋಡಿ ಮತ್ತು ಶಿಕಾರಿಪುರದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಎರಡರಲ್ಲಿ ಮತ್ತು ಬಿಜೆಪಿ ಒಂದರಲ್ಲಿ ಜಯ ಸಾಧಿಸಿದೆ.

Rohinton Mistry


ಆಗ 24, 2014

ಸಮಾಧಿಗಳ ಆಗರವಾಗುತ್ತಿರುವ ಕಲಾಗ್ರಾಮ


ಕಲಾಗ್ರಾಮದಲ್ಲಿ ಅನಂತಮೂರ್ತಿಯವರ ಅಂತ್ಯಸಂಸ್ಕಾರ

ಡಾ ಅಶೋಕ್ ಕೆ ಆರ್
ಸತ್ತ ಖ್ಯಾತನಾಮರನ್ನು ಸಮಾಧಿಯ ಪ್ರತಿಮೆಯೊಳಗೆ ಬಂಧಿಸುವುದು ಹೊಸತೇನಲ್ಲ. ಕೆಲವೊಮ್ಮೆ ಈ ಸಮಾಧಿಯ ಸ್ಥಳಗಳು ಅವರ ಹಾದಿಯಲ್ಲಿ ಕೊಂಚ ದೂರವಾದರೂ ನಡೆದು ಅನುಭೂತಿ ಪಡೆದುಕೊಳ್ಳುವವರಿಗೆ ಸಹಕಾರಿಯಾಗುತ್ತದೆ. ಬಹಳಷ್ಟು ಬಾರಿ ಈ ಸ್ಥಳಗಳು ರಂಜನೀಯ ಪ್ರೇಕ್ಷಣೀಯ ಸ್ಥಳಗಳಾಗಿ ಪರಿವರ್ತಿತವಾಗಿ ವಾಣಿಜ್ಯ ಉದ್ದೇಶಕ್ಕೆ ಮೀಸಲಾಗಿಬಿಡುವ ಅಪಾಯವಿದೆ. ಅನೇಕ ಕಡೆ ಈ ಅಪಾಯ ಜಾರಿಯೂ ಆಗಿಹೋಗಿದೆ.

Rohinton Mistry


ಆಗ 22, 2014

ಸತ್ಯ ಕೂಡ ಚಲನಶೀಲ ಎಂದರಿವು ಮೂಡಿಸಿದ ಅನಂತಮೂರ್ತಿ



ಡಾ ಅಶೋಕ್ ಕೆ ಆರ್. 
ಜಾತ್ಯತೀತವಾಗಿಯೇ ಬದುಕಿ ಬರೆದು ಬೆಳೆದ ಅವರು ಕುಮಾರಸ್ವಾಮಿ, ದೇವೇಗೌಡರನ್ನು ಇದ್ದಕ್ಕಿದ್ದಂತೆ ಬೆಂಬಲಿಸಿಬಿಡುತ್ತಾರೆ, ಕೆಲವೇ ವರುಷಗಳಲ್ಲಿ ಜೀವನಪರ್ಯಂತ ವಿರೋಧಿಸಿಕೊಂಡೇ ಬಂದಿದ್ದ ಕಾಂಗ್ರೆಸ್ಸನ್ನು ಸಿದ್ಧರಾಮಯ್ಯನವರ ಮೇಲಿನ ನಂಬುಗೆಯಿಂದ ಗೆಲ್ಲಿಸಿ ಎಂದು ಪತ್ರಿಕಾ ಹೇಳಿಕೆ ಕೊಡುತ್ತಾರೆ. ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ಅದರಷ್ಟೇ ಅಪಾಯಕಾರಿ ಎಂಬ ಅರಿವಿದ್ದೂ ಕಾಂಗ್ರೆಸ್ಸಿಗೆ ಮತಹಾಕಿ ಎಂದು ಹೇಳಿಬಿಡುತ್ತಾರೆ. ಇನ್ನೊಂದೈದು ವರುಷಗಳು ಅವರು ಬದುಕಿದ್ದರೆ ಮೋದಿ ಸಂಪೂರ್ಣ ಸರಿಯಿಲ್ಲದಿದ್ದರೂ ಪರ್ಯಾಯಗಳಿಲ್ಲದ ಕಾರಣ, ಇರುವ ಪರ್ಯಾಯಗಳು ಮೋದಿಗಿಂತ ಅಪಾಯಕಾರಿಯಾಗಿರುವ ಕಾರಣ ಮೋದಿಯನ್ನೇ ಗೆಲ್ಲಿಸಿದರೆ ಒಳ್ಳೆಯದೇನೋ ಎಂದು ಹೇಳಿಕೆ ನೀಡಿದ್ದರೂ ಅನಂತಮೂರ್ತಿಯವರ ಬಗೆಗೆ ಅಚ್ಚರಿಯಾಗುತ್ತಿರಲಿಲ್ಲ. ಇದು ಅವಕಾಶವಾದಿತನ, ಸ್ವಾರ್ಥಕ್ಕಾಗಿ ಕ್ಷಣಕ್ಕೊಂದು ಬಣ್ಣ ಬದಲಿಸುವ ನೀಚತನ – ಇನ್ನು ಅನೇಕಾನೇಕ ರೀತಿಯಲ್ಲಿ ಅವರನ್ನು ಟೀಕಿಸಿದ್ದರೂ ಅವರದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತಿರಲಿಲ್ಲವೇನೋ. ಯಾಕೆಂದರೆ ಅನಂತಮೂರ್ತಿ (ನಾನವರನ್ನು ಅವರ ಬರಹಗಳ ಮೂಲಕ ತಿಳಿದುಕೊಂಡಂತೆ) ಇದ್ದಿದ್ದೇ ಹಾಗೆ. ಸತ್ಯವೆಂಬುದು ಅವತ್ತಿನ ಆ ಮಟ್ಟಿಗಿನ ವಾಸ್ತವವೇ ಹೊರತು ಅದು ಸರ್ವಕಾಲಿಕ ಸತ್ಯವಾಗಲು ಸಾಧ್ಯವೇ ಇಲ್ಲ ಎಂಬುದು ಅವರ ಲೇಖನಗಳನ್ನು ಓದಿದಾಗ ಅರಿವಾಗುತ್ತದೆ.