ನವೆಂ 30, 2014

ಗೋವಾದಲ್ಲಿ ಆರಂಭ ಚಿತ್ರದ ದ್ವನಿಸುರುಳಿ ಬಿಡುಗಡೆ.

aarambha goa publicity
ಪತ್ರಿಕಾ ಪ್ರಕಟಣೆ 
ಅಖಿಲ ಗೋವಾ ಕನ್ನಡ ಮಹಾ ಸಂಘ ಅಧ್ಯಕ್ಷರಾದ ಸಿದ್ದಣ್ಣ ಮೀಟಿಯವರು, ಎಸ್ ಅಭಿ ಹನಕೆರೆ ನಿರ್ದೇಶನದ  ಆಡಿಯೋ ಸೀಡಿಯನ್ನು ಗೋವಾ ಬೀಚಿನಲ್ಲಿ ಬಿಡುಗಡೆಗೊಳಿಸಿದರು.

ನವೆಂ 25, 2014

ನಾನೂ ಶಿಲ್ಪವಾಗಬೇಕು....

ಉಮೇಶ ಮುಂಡಳ್ಳಿ ಭಟ್ಕಳ
ಬನ್ನಿ ಯಾರಾದರೂ
ಎತ್ತಿಕೊಳ್ಳಿ,
ಶಿಲ್ಪವಾಗಿಸಿ,
ಕಪ್ಪು ಕಲ್ಲಿನಂತೆ ನಾನು
ಗರ್ಭಗುಡಿಯ ಸೇರಬೇಕು,
ಶಿಲ್ಪವಾಗಬೇಕು.

ಅಹಮ್ಮುಗಳಿಗೆ ಬಲಿಯಾದ ಧರ್ಮ ಮತ್ತು ಕರ್ತವ್ಯ

kannada news channels
Dr Ashok K R
ಟಿ.ವಿ 9 ಮತ್ತು ಇಂಧನ ಸಚಿವ ಡಿ.ಕೆ ಶಿವಕುಮಾರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಕೆಟ್ಟತನಕ್ಕಾಗಿ! ಡಿ.ಕೆ.ಶಿವಕುಮಾರರ ಮೇಲೆ ಟಿ.ವಿ.9 ಮತ್ತು ಅದರ ಸೋದರ ಸಂಸ್ಥೆ ನ್ಯೂಸ್ 9 ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಆರೋಪವನ್ನೊರಸಿದ್ದಾರೆ. ಡಿ.ಕೆ.ಶಿವಕುಮಾರರು ತಮ್ಮ ಅಧಿಕಾರದ ಪ್ರಭಾವಳಿಯನ್ನು ಬಳಸಿ ಕೇಬಲ್ ಆಪರೇಟರ್ರುಗಳ ಮೂಲಕ ಟಿ.ವಿ.9 ಮತ್ತು ನ್ಯೂಸ್ 9 ವಾಹಿನಿ ಪ್ರಸಾರವಾಗದಂತೆ ನೋಡಿಕೊಂಡಿದ್ದಾರೆ! ಟಿ.ವಿ.9 ವಾಹಿನಿಯ ಪ್ರಕಾರ ಸೋಮವಾರ ಸಂಜೆಯಿಂದ ಮಂಗಳವಾರ ಬೆಳಿಗ್ಗೆಯ ವರೆಗೆ ಈ ಬ್ಲ್ಯಾಕ್ ಔಟ್ ನಡೆದಿದೆ. ಮಾಧ್ಯಮಗಳನ್ನು ಹತ್ತಿಕ್ಕುವ ಸರ್ಕಾರದ ಪ್ರತಿನಿಧಿಯ ಪ್ರಯತ್ನ ಸ್ವಹಿತಾಸಕ್ತಿಗಾಗಿ ನಡೆಸಿದ ಫ್ಯಾಸಿಸ್ಟ್ ಮನೋಭಾವವೇ ಹೊರತು ಮತ್ತೇನಲ್ಲ. ಸರಕಾರದ ವಿರುದ್ಧ ಒಂದಾದ ಮೇಲೊಂದರಂತೆ ವರದಿಗಳನ್ನು ಪ್ರಕಟಿಸುತ್ತಿರುವುದು ಈ ಹತ್ತಿಕ್ಕುವಿಕೆಗೆ ಕಾರಣವಂತೆ! ಮಾಧ್ಯಮದ ಕೆಲಸವೇ ವಿರೋಧ ಪಕ್ಷದಂತೆ ಕೆಲಸ ನಿರ್ವಹಿಸುವುದಲ್ಲವೇ? ಅದನ್ನೇ ಅವರನ್ನು ಮಾಡಬೇಡಿ (ಅವರು ಮಾಡುತ್ತಿಲ್ಲ ಎಂಬುದು ಮತ್ತೊಂದು ಸತ್ಯ) ಎಂದರೆ ಹೇಗೆ ಸ್ವಾಮಿ? ಉಳಿದ ವಾಹಿನಿಗಳೂ ಕೂಡ ಸರಕಾರದ ವಿರುದ್ಧ ವರದಿಗಳನ್ನು ಬಿತ್ತರಿಸುವಾಗ ಟಿ.ವಿ.9 ಮಾತ್ರ ಹೇಗೆ ಮತ್ತು ಏಕೆ ಬಹಿಷ್ಕಾರಕ್ಕೊಳಗಾಯಿತು?

ನವೆಂ 22, 2014

What is a real temple?


temple in subramanya
Shanmukha HR
Having prayed to gods and goddesses in so many temples, I once gave a thought to what's it that we really go to temple for...? All of us go to temples to pray for one or the other reason. Most of us pray for our loved ones and feel protected.

ನವೆಂ 21, 2014

ವಾಡಿ ಜಂಕ್ಷನ್ .... ಭಾಗ 7

wadi junction
Dr Ashok K R
ಎಂಟು ಘಂಟೆಯ ಸುಮಾರಿಗೆ ಕ್ರಾಂತಿ ರೂಮಿಗೆ ಬಂದ. ಬನ್ನಿಮಂಟಪದಲ್ಲಿ ಟೆಂಪೋ ಹಿಡಿದು ಕಳಸ್ತವಾಡಿಯಲ್ಲಿ ಇಳಿದುಕೊಂಡು ಚಕ್ರೇಶ್ವರಿ ಬಾರಿನಲ್ಲಿ ಎರಡು ಬಿಯರ್ ಬಾಟಲ್ ಖರೀದಿಸಿ ಪಕ್ಕದ ರಾಜಹಂಸ ಡಾಬಾಕ್ಕೆ ಕಾಲಿಟ್ಟಾಗ ಸಮಯ ಒಂಭತ್ತಾಗಿತ್ತು. ಕ್ರಾಂತಿ ಯೋಚನಾಲಹರಿಯಲ್ಲಿ ತೇಲುತ್ತಾ ಮೌನವಾಗುಳಿದಿದ್ದ. ಉಳಿದ ಮೂವರೂ ಕ್ರಾಂತಿಯನ್ನು ಯಾವ ರೀತಿಯಿಂದ ಮಾತಿಗೆ ಹಚ್ಚಬೇಕು ಎಂಬುದನ್ನು ಚಿಂತಿಸುತ್ತಾ ಕುಳಿತಿದ್ದರು. ‘ನಿಮ್ಮಿಬ್ಬರಲ್ಲೊಬ್ಬರು ಮೊದಲು ಮಾತನಾಡಬೇಕು ನಂತರವಷ್ಟೇ ನಾನು ಆ ವಿಷಯವನ್ನು ಚರ್ಚಿಸೋದು’ ಎಂದು ತುಷಿನ್ ಮೊದಲೇ ಹೇಳಿಬಿಟ್ಟಿದ್ದ. 
Also Read: ವಾಡಿ ಜಂಕ್ಷನ್ ಭಾಗ 6

ನವೆಂ 19, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 2

modi cabinetDr Ashok K R
ಕೇಂದ್ರ ಸರ್ಕಾರವನ್ನು ರೂಪಿಸುವಲ್ಲಿ ಉತ್ತರ ಪ್ರದೇಶದ ಪ್ರಭಾವ ಹೆಚ್ಚು. ದೊಡ್ಡ ರಾಜ್ಯ, ವಿಪರೀತ ಜನಸಂಖೈಯಿರುವ ಉತ್ತರಪ್ರದೇಶದಿಂದ ಎಂಭತ್ತು ಜನ ಸಂಸದರು ಲೋಕಸಭೆ ಪ್ರವೇಶಿಸುತ್ತಾರೆ. ಸಂಸದರ ಸಂಖೈಯ ಆಧಾರದಲ್ಲಿ ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರದಿಂದ ಆಯ್ಕೆಯಾಗುವವರ ಸಂಖೈ ನಲವತ್ತೆಂಟು! ಉತ್ತರ ಪ್ರದೇಶ ಗೆದ್ದರೆ ಅಧಿಕಾರದ ಗದ್ದುಗೆ ಏರಿದಂತೆಯೇ ಎಂಬ ಮಾತು ಅದಕ್ಕಾಗೇ ಹುಟ್ಟಿರಬೇಕು. ಎಂಭತ್ತು ಸ್ಥಾನದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಪ್ಪತ್ತೊಂದು ಸ್ಥಾನದಲ್ಲಿ ಜಯಗಳಿಸಿತ್ತು. ಸಹಜವಾಗಿ ಅಲ್ಲಿನವರಿಗೆ ಸಚಿವ ಸಂಪುಟದಲ್ಲೂ ಪ್ರಾಮುಖ್ಯತೆ ದೊರೆಯಬೇಕು. ಮೊದಲ ಸಂಪುಟದಲ್ಲಿ ಉತ್ತರಪ್ರದೇಶದ ಎಂಟು ಮಂದಿಯಿದ್ದರೆ ಈ ಬಾರಿ ಮತ್ತೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ದಲಿತ ನಾಯಕರಿಗೆ, ನಿಶಾದರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ ಆರೆಸ್ಸೆಸ್ ನಾಯಕ ರಾಮ್ ಶಂಕರ್ ಕಥಾರಿಯಾ, ನಿಶಾದರ ಮತಗಳನ್ನು ಬಿಜೆಪಿಗೆ ತಂದುಕೊಟ್ಟ ಸಾಧ್ವಿ ನಿರಂಜನ್ ಜ್ಯೋತಿಯವರಿಗೆ ಸಚಿವ ಸ್ಥಾನ ದಕ್ಕಿದೆ. 
ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ ಭಾಗ 1

ನವೆಂ 18, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 1


modi cabinet
Dr Ashok K R
ಸಂಪುಟ ವಿಸ್ತರಣೆಯೆಂಬುದು ಪ್ರಹಸನದಂತೆ ನಡೆಯುವ ಸಂದರ್ಭಗಳೇ ಹೆಚ್ಚಾಗುತ್ತಿರುವ ದಿನಗಳಲ್ಲಿ ನರೇಂದ್ರ ಮೋದಿಯವರ ಸಂಪುಟ ವಿಸ್ತರಣೆಯ ಕಾರ್ಯ ಸುಸೂತ್ರವಾಗಿ ನಡೆದಿದೆ ಎಂದೇ ಹೇಳಬಹುದು. ಅನೇಕ ವರುಷಗಳಿಂದ ಸಮ್ಮಿಶ್ರ ಸರ್ಕಾರಗಳೇ ಅಸ್ತಿತ್ವದಲ್ಲಿದ್ದ ಕಾರಣ ಬಹುಮತ ಪಡೆಯಲಾಗದ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಕೋರಿಕೆ – ಅಣತಿಯ ಮೇರೆಗೆ ಸಂಪುಟ ವಿಸ್ತರಣೆ ನಡೆಸಬೇಕಾಗುತ್ತಿತ್ತು. ಒಂದು ಪಕ್ಷಕ್ಕೆ ಕೊಟ್ಟರೆ ಮತ್ತೊಂದು ಪಕ್ಷಕ್ಕೆ ಮುನಿಸು. ಅವರ ಮುನಿಸು ತಣಿಸುವಷ್ಟರಲ್ಲಿ ಮಗದೊಬ್ಬರ ಕೋಪ; ಇವೆಲ್ಲ ಘಟನೆಗಳೂ ಸೇರಿ ಸಂಪುಟ ವಿಸ್ತರಣೆಯೆಂದರೆ ಅಧಿಕಾರದಲ್ಲಿರುವ ಮುಖ್ಯಸ್ಥನಿಗೆ ತಲೆನೋವಿನ ಸಂಗತಿಗಳನ್ನಾಗಿ ಮಾಡಿತ್ತು. ದಶಕಗಳ ನಂತರ ಕೇಂದ್ರದಲ್ಲಿ ಏಕಪಕ್ಷ ಬಹುಮತ ಪಡೆದಿದೆ, ಚುನಾವಣಾ ಪೂರ್ವದಿಂದ ಜೊತೆಗಿದ್ದ ಮಿತ್ರಪಕ್ಷಗಳಿಗೆ ಸಚಿವ ಸ್ಥಾನ ನೀಡಿದ್ದ ಬಿಜೆಪಿಯ ಮೇಲೆ ‘ನಮಗೆ ಇಂತಹ ಸ್ಥಾನ ಬೇಕು’ ಎಂದು ಒತ್ತಾಯಿಸುವಂತಿಲ್ಲ, ಒತ್ತಾಯಿಸಿದರೆ ಎನ್ ಡಿ ಎ ತೊರೆದು ಹೋಗಲು ಸಿದ್ಧರಾಗಬೇಕಾಗುತ್ತದೆ. ಅದರಲ್ಲೂ ಏಕಪಕ್ಷಕ್ಕಿಂತ ಏಕವ್ಯಕ್ತಿ ಆಡಳಿತದಂತಿರುವ ಈಗಿನ ಕೇಂದ್ರ ಸರ್ಕಾರದಲ್ಲಿ ಬಿಜೆಪಿಯವರೇ ಮೇಲಿನವರ ಮಾತುಗಳನ್ನು ಪ್ರಶ್ನಿಸುವಂತಿಲ್ಲ, ಇನ್ನು ಉಳಿದ ಪಕ್ಷಗಳು ಪ್ರಶ್ನಿಸಲು ಹೇಗೆ ಸಾಧ್ಯ?! ಕಾಂಗ್ರೆಸ್ಸಿನ ಹೈಕಮಾಂಡಿನ ಕಾರ್ಯವೈಖರಿಯನ್ನು ಟೀಕಿಸುತ್ತಿದ್ದ ಬಿಜೆಪಿಯಲ್ಲೂ ಹೈಕಮಾಂಡ್ ಸಂಸ್ಕೃತಿ ಬಹುವೇಗವಾಗಿ ಬೆಳೆಯುತ್ತಿದೆ! ಅಲ್ಲಿಗೆ ಬಿಜೆಪಿ ಕಾಂಗ್ರೆಸ್ ಆಗುವ ಪ್ರಯತ್ನದಲ್ಲಿ ವೇಗದಿಂದಲೇ ಮುಂದುವರೆಯುತ್ತಿದೆ!

ಡಬ್ಬಿಂಗ್ ಮುಗಿಸಿದ 'ಆರಂಭ'

ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಡಿ.ಗಣೇಶ್ ವಿ.ನಾಗೇನಹಳ್ಳಿ ನಿರ್ಮಿಸುತ್ತಿರುವ 'ಆರಂಭ' ಚಿತ್ರ ಡಬ್ಬಿಂಗ್ ಪೂರ್ಣಗೊಳಿಸಿ ರೀರೆಕಾರ್ಡಿಂಗಿಗೆ ಸಿದ್ಧವಾಗಿದೆ. ಚಿತ್ರದ ಪ್ರಮುಖ ತಾರಾಗಣದಲ್ಲಿ ಮಿಥುನ್ ಪ್ರಕಾಶ್, ರಸಗವಳ ನಾರಾಯಣ,ಬೇಬಿ ಹಾಸಿನಿ,ಅಭಿರಾಮಿ,ಡಿಸ್ಕೊ ಪೃಥ್ವಿ,ಬಳ್ಳಾರಿ ರಾಘವೇಂದ್ರ,ಪ್ರವೀಣ್,ಬ್ಯಾಂಕ್ ಜನಾರ್ಧನ,ಪಾಂಡು ಕುಮಾರ್,ಅಭಿರಾಜ್ ಅಭಿನಯಿಸುತ್ತಿದ್ದಾರೆ. ಎಸ್. ಅಭಿ ಹನಕೆರೆ ನಿರ್ದೇಶನದ ಚಿತ್ರಕ್ಕೆ ಸಂಗೀತ ನೀಡಿರುವುದು ಗುರುಕಿರಣ್.
ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್ ಊರಾದ ಕಣಗಾಲಿನಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಆರಂಭ ಚಿತ್ರತಂಡದ್ದು. ಚಿತ್ರರಂಗದ ಗಣ್ಯರನ್ನು ಮತ್ತು ಸಿನಿಮಾಸಕ್ತರನ್ನು ಕಣಗಾಲಿಗೆ ಆಹ್ವಾನಿಸಿ ಪುಟ್ಟಣ್ಣ ಕಣಗಾಲರ ನೆನಪಿನಲ್ಲಿ 'ಆರಂಭ' ಚಿತ್ರದ ಪ್ರೀಮಿಯರ್ ಶೋ ನಡೆಸುವ ಉದ್ದೇಶ ನಿರ್ದೇಶಕರಿಗಿದೆ. 
ಜಿ.ಮ್ಯೂಸಿಕ್ ಲಾಂಛನದಲ್ಲಿ ಚಿತ್ರದ ಹಾಡುಗಳು ಬಿಡುಗಡೆಗೊಂಡಿದ್ದು ಜನರ ಮನಗೆದ್ದಿದೆ.

ನವೆಂ 11, 2014

ಇಂತಿ ನಮಸ್ಕಾರಗಳು

inthi namaskaragalu
ಇಂತಿ ನಮಸ್ಕಾರಗಳು
ಬಹುಶಃ ಇತ್ತೀಚಿನ ದಿನಗಳಲ್ಲಿ ಅಷ್ಟೇನೂ ಅರ್ಥವಾಗದ, ಅರ್ಥವಾಗದಿದ್ದರೂ ಓದಿಸಿಕೊಂಡ ಪುಸ್ತಕವೆಂದರೆ ನಟರಾಜ್ ಹುಳಿಯಾರರು ಪಿ.ಲಂಕೇಶ್ ಮತ್ತು ಡಿ.ಆರ್.ನಾಗರಾಜರ ಕುರಿತು ಬರೆದಿರುವ ನೆನಪಿನ ಸಂಚಿಕೆ 'ಇಂತಿ ನಮಸ್ಕಾರಗಳು'. ಈ ಪುಸ್ತಕ ಅರ್ಥವಾಗದ್ದಕ್ಕೆ ಮುಖ್ಯ ಕಾರಣ ನಟರಾಜ್ ಹುಳಿಯಾರರು ಬರೆದಿರುವ ಇಬ್ಬರ ಬರವಣಿಗೆ, ಬದುಕಿನ ಬಗೆಗೆನ ಅಷ್ಟೇನೂ ತಿಳಿಯದಿರುವುದು.