ಸೆಪ್ಟೆಂ 18, 2018
ಸೆಪ್ಟೆಂ 17, 2018
"ಹೆಣ್ಣೊಪ್ಪಿಸಿ ಕೊಡೋದು" ಎಂಥೊಂದು ಶಾಸ್ತ್ರದ ಬೆನ್ನೇರಿ.....
ಪದ್ಮಜಾ ಜೋಯಿಸ್
"ಮದುವೆ" ಒಂದು ಮಹತ್ವದ ಸಂಪ್ರದಾಯ, ದೇವಾನುದೇವತೆಗಳ ವಿವರಗಳನ್ನು ಅನುಸರಿಸಿ ಬಂದ ಉಲ್ಲೇಖಗಳು ನಮ್ಮ ಮುಂದೆ ಸಾಕಷ್ಟು ಇವೆ, ಅಂತೆಯೇ ಅನಾದಿ ಕಾಲದಿಂದಲೂ ಇದೊಂದು ಪ್ರಮುಖ ಆಚರಣೆಯಾಗಿ ಶಾಸ್ತ್ರಬದ್ಧವಾಗಿ ನೆಡೆಯುವ ಕಾರ್ಯ, ಇದು ಸಂಸಾರ ಬ಼ಂಧನವನ್ನು ಸಾರುವ ಪತಿಪತ್ನಿಯರ ಸಮಾಗಮಕ್ಕೆ ಅನುವು ಮಾಡಿಕೊಡಲು ಹಿರಿಯರಿಂದ ಪರಂಪರಾನುಗತವಾಗಿ ಬಂದ ಒಂದು ಹಾದಿ... ಮೊದಮೊದಲು 7 ನಂತರ 5 ನಂತರ 3 ನಂತರ 2 ಈಗ 1ಒಂದೇ ದಿನಕ್ಕಾಗಿದೆ, ಇದರಲ್ಲಿ ತಥ್ಯವೂ ಇದೆ.. ಈಗಿನ ರಾಕೆಟ್ ಯುಗದಲ್ಲಿ ಅದಕ್ಕೆಲ್ಲಿ ಸಮಯ ??
ಜೀರಿಗೆ ಬೆಲ್ಲದಿಂದಿಡಿದು ಮಾಂಗಲ್ಯಧಾರಣೆವರೆಗೆ ಹಂತಹಂತವಾಗಿ ಪರಿಪೂರ್ಣಗೊಂಡನಂತರದ ಈ ಘಳಿಗೆ ಹೆಣ್ಣೊಪ್ಪಿಸಿ ಕೊಡುವ/ ಮನೆತುಂಬಿಸಿಕೊಡುವ ಶಾಸ್ತ್ರ , ಈ ಕಾರ್ಯ ಮಾತ್ರ ಹೆತ್ತೊಡಲಿನೊಂದಿಗೆ ನೆರೆದವರೆಲ್ಲರ ಮನಕಲಕಿ ಕರುಳು ಮೀಟುವಂತಹುದು, ಇಲ್ಲಿ ಹೆಣ್ಣೊಪ್ಪಿಸಿಕೊಡುವವರು ಮಾತ್ರವಲ್ಲ ಒಪ್ಪಿಸಿಕೊಂಡವರೂ ಕಣ್ಣೊರೆಸಿಕೊಳ್ಳುವುದು, ಇದಕ್ಕೊಂದಷ್ಟು ಹೆಂಗೆಳೆಯರ ಜಾನಪದ ಭಾವಗೀತೆ ಸಂಪ್ರದಾಯಗೀತೆಗಳ ಹಿಮ್ಮೇಳ ಬೇರೆ ದುಃಖದ ಬಿಕ್ಕುಗಳೊಂದಿಗೆ..... ನಂಬಿಕೆ ಭರವಸೆಗಳು ಸುಂದರ ಸಮರಸ ಬಾಳಿನ ಬುನಾದಿಯೇ ಆಗಿದೆ.....
ಶಾಸ್ತ್ರ ಸಂಪ್ರದಾಯ ಮೂಢನಂಬಿಕೆ ಎಂದು ಹೀಗೆಳೆವ ಮುನ್ನ ವೈಜ್ಞಾನಿಕ ಕಾರಣಗನ್ನೂ ವಿಶ್ಷ್ಲೇಷಿಸಿ ವಿವೇಚನೆಯಿಂದ ವಿವೇಕಯುತವಾಗಿ ಅರಿತು ನೆಡೆದಲ್ಲಿ ಎಲ್ಲವೂ ಸೊಗಸಾಗಿ ಹಿತವಾಗಿಯೇ ಇರುತ್ತವೆ,
ಸೆಪ್ಟೆಂ 16, 2018
ತೆಲಂಗಾಣ: ಕೆ. ಚಂದ್ರಶೇಖರ್ ರಾವ್ ಅವರ ರಾಜಕೀಯ ಜೂಜಾಟ!
ಕು.ಸ.ಮಧುಸೂದನ ರಂಗೇನಹಳ್ಳಿ
ವರ್ತಮಾನದ ರಾಜಕಾರಣದಲ್ಲಿ ಇದ್ದಕ್ಕಿದ್ದಂತೆ ಯೂಟರ್ನ್ ಹೊಡೆದು ತನ್ನ ಅಧಿಕಾರದಾಹವನ್ನು ಪ್ರದರ್ಶಿಸಿ, ಅದಕ್ಕೆ ಪೂರಕವಾಗಿ ಸಂವಿದಾನದತ್ತವಾಗಿ ಜನತೆ ನೀಡಿದ ಐದು ವರ್ಷದ ಅಧಿಕಾರಾವಧಿಯನ್ನು ತಿರಸ್ಕರಿಸಿ, ವಿದಾನಸಭೆಯನ್ನು ವಿಸರ್ಜಿಸಿದ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಶ್ರೀ ಕೆ.ಚಂದ್ರಶೇಖರ್ ರಾವ್ ತಮ್ಮ ರಾಜ್ಯದ ಜನತೆಗೆ ಮಾತ್ರವಲ್ಲದೆ ಸಂವಿದಾನಕ್ಕೂ ದ್ರೋಹ ಬಗೆದಿದ್ದಾರೆ. ಈ ಹಿಂದೆಯೂ ಇಂಡಿಯಾದ ರಾಜಕಾರಣದಲ್ಲಿ ಹಲವಾರು ಮುಖ್ಯಮಂತ್ರಿಗಳು ಅವಧಿಗು ಮುನ್ನವೇ ವಿದಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿದ್ದಿದೆ. ಆದರೆ ಅವರೆಲ್ಲರಿಗೂ ಹೇಳಿಕೊಳ್ಳಲು ಒಂದೊಂದು ಕಾರಣಗಳಿರುತ್ತಿದ್ದವು. ಸ್ಪಷ್ಟ ಬಹುಮತ ಇಲ್ಲದಿರುವುದು, ಸರಕಾರದ ಒಳಗೆ ಹಲವು ರೀತಿಯ ಭಿನ್ನಮತೀಯ ಚಟುವಟಿಕೆಗಳಿರುವುದು, ಸರಕಾರವೇ ದೊಡ್ಡ ಹಗರಣಗಳ ಸುಳಿಗೆ ಸಿಲುಕುವುದು ಹೀಗೇ ವಿದಾನಸಭೆ ವಿಸರ್ಜನೆ ಸಮರ್ಥಿಸಿಕೊಳ್ಳಲು ಅವರುಗಳಿಗೆ ಗಟ್ಟಿ ಕಾರಣಗಳಿರುತ್ತಿದ್ದವು.
ಈ ಹಿನ್ನೆಲೆಯಲ್ಲಿ ನೋಡಿದರೆ ಚಂದ್ರಶೇಖರ್ರಾವ್ ಅವರಿಗೆ ಇಂತಹ ಯಾವುದೇ ಕಾರಣಗಳೂ ಇರಲಿಲ್ಲ ಮತ್ತು ಅವರ ಸರಕಾರದ ಭದ್ರತೆಗೆ ಯಾವುದೇ ಆಂತರೀಕ ಮತ್ತು ಬಾಹ್ಯ ಬೆದರಿಕೆಯೂ ಇರಲಿಲ್ಲ. ನೂರಾ ಹತ್ತೊಂಭತ್ತು ಸಂಖ್ಯಾಬಲದ ವಿದಾನಸಭೆಯಲ್ಲಿ ಅವರ ಟಿ.ಆರ್.ಎಸ್.ಪಕ್ಷಕ್ಕೆ ತೊಂಭತ್ತು ಸ್ಥಾನಗಳ ರಾಕ್ಷಸ ಬಹುಮತ ಲಭ್ಯವಿತ್ತು. ಜೊತೆಗೆ ಅಂತಹ ಯಾವುದೇ ಭಿನ್ನಮತೀಯ ಚಟುವಟಿಕೆಯಾಗಲಿ, ಹಗರಣಗಳ ಆರೋಪವಾಶಗಲಿ ಇರಲಿಲ್ಲ. ಇಷ್ಟೆಲ್ಲ ಇದ್ದಾಗ್ಯೂ ಚಂದ್ರಶೇಖರ್ ರಾವ್ ಮುಂದಿನ ವರ್ಷದ ಮೇ-ಜೂನ್ ತಿಂಗಳಲ್ಲಿ ಅಂತ್ಯಗೊಳ್ಳಬೇಕಿದ್ದ ವಿದಾನಸಭೆಯನ್ನು ಹೆಚ್ಚೂಕಡಿಮೆ ಹತ್ತು ತಿಂಗಳಿಗೂ ಮುನ್ನವೇ ವಿಸರ್ಜನೆ ಮಾಡಿ ತಮ್ಮ ರಾಜ್ಯವನ್ನು ಚುನಾವಣೆಗೆ ನೂಕಿದ್ದಾರೆ.
ಸೆಪ್ಟೆಂ 11, 2018
‘ದುರಿತಕಾಲದ ದನಿ’: ವರ್ತಮಾದ ತಲ್ಲಣಗಳಿಗೆ ಹಿಡಿದ ಕೈಗನ್ನಡಿ
ಅದು ಹುಟ್ಟುವುದು ನೋವಿನ ಛೀತ್ಕಾರಗಳಲ್ಲಿ...!!
ಕು.ಸ.ಮಧುಸೂದನ ರಂಗೇನಹಳ್ಳಿ ಯವರ’ದುರಿತಕಾಲದ ದನಿ’ ಹೆಸರೇ ಹೇಳುವಂತೆ ವರ್ತಮಾನದ ವಾಸ್ತವವನ್ನೆಲ್ಲಾ ಸಾರಾಸಗಟಾಗಿ, ತುಸು ಕಟುವೇ ಎನಿಸುವ ಶೈಲಿಯಲ್ಲಿ ಭಟ್ಟೀ ಇಳಿಸಿದ ಸಂಕಲನ.ಈ ದನಿಯ ಹಿಂದಿನ ಕಾಳಜಿ ದೀನದಲಿತರ ಕಷ್ಟ ಸಂಕಷ್ಟಗಳಿಗೆ ಮಿಡಿಯುವ ಹೃದಯದ ಸ್ವಚ್ಛ ಶುದ್ಧ ಮಾನವೀಯತೆ ಮನಕಲಕುವಂತಿದೆ.
‘ನನ್ನ ಕವಿತೆ ಕುರಿತಂತೆ’ ಎ಼ಂದು ತಮ್ಮ ಕವಿತೆಗಳ ಬಗ್ಗೆ ತಮ್ಮದೇ ಶೈಲಿಯ ವಿವರಣೆಯೇ ಅದ್ಭುತವಾಗಿದೆ.. ಅವರ ಮಾತುಗಳಲ್ಲೇ ಹೇಳಬೇಕೆಂದರೇ...
"ಒಂದು ಕಡೆ ಜಾಗತೀಕರಣವು ನಮ್ಮ ಸ್ಥಳೀಯ ಸಂಸ್ಕೃತಿಯನ್ನು ನಾಶಪಡಿಸುತ್ತ ನೆಡೆದಿದ್ದರೇ, ಇನ್ನೊಂದೆಡೆ ಮತೀಯ ಮೂಲಭೂತವಾದ ನಮ್ಮ ಬಹುಸಂಸ್ಕೃತಿಯ ಪರಂಪರೆಯ ಮನೆಯ ಹಂದರವನ್ನು ಕೆಡವಲು ಹೊಂಚು ಹಾಕುತ್ತಿದೆ, ಪ್ರಭುತ್ವ ಧರ್ಮದ ಆಸರೆಯೊಂದಿಗೆ ಅಧಿಕಾರ ಚಲಾಯಿಸುವ ಮಾತಾಡುತ್ತಿದ್ದರೇ ಧರ್ಮವೋ ಸ್ವತಃ ತಾನೇ ಪ್ರಭುತ್ವವಾಗುವ ದಿಸೆಯಲ್ಲಿ ತನ್ನನ್ನು ಅಣಿಗೊಳಿಸಿಕೊಳ್ಳುತ್ತಿದೆ. ಹೀಗೆ ಬಂಡವಾಳ, ಧರ್ಮ , ಪ್ರಭುತ್ವಗಳು ಒಟ್ಟಾಗಿ ಛಿದ್ರಗೊಳಿಸಲು ಹೊರಟಿರುವ ಒಂದು ಸಮಾಜವನ್ನು ಎಚ್ಚರಿಕೆಯ ಸ್ಥಿತಿಯಲ್ಲಿಡಲು ಸಾಹಿತ್ಯ ಮತ್ತು ಸೃಜನಶೀಲ ಕಲಾಪ್ರಕಾರಗಳು ಮುಂದಾಗಬೇಕಿದೆ.""
‘ದುರಿತಕಾಲದ ದನಿ’ ಕವನಸಂಕಲನದ ಬಿಡುಗಡೆ ಸಮಾರಂಭ.
ಕು.ಸ.ಮಧುಸೂದನರಂಗೇನಹಳ್ಳಿ ಅವರ ಕವನ ಸಂಕಲನ ಲೋಕಾರ್ಪಣೆ ಮಾಡಿದ ಖ್ಯಾತ ವಿಮರ್ಶಕ ಆರ್.ಜಿ. ಹಳ್ಳಿ ನಾಗರಾಜ್ ಈ ಸಂದರ್ಭದಲ್ಲಿ ಮಾತನಾಡುತ್ತ,
“ಸಂತೋಷ ಕೊಡುವ ಕಾಲದಲ್ಲಿ ನಾವು ಬದುಕುತ್ತಿಲ್ಲ ಅಸಹಿಷ್ಣುತೆ, ಭಯದ ಜೊತೆಗೆ ಉಸಿರುಗಟ್ಟುವ ವಾತಾವರಣದಲ್ಲಿ ಬದುಕುತ್ತಿದ್ದೇವೆ.ಸಂಸ್ಕೃತಿಯ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಹತ್ತಿಕ್ಕುವ ಕೆಲಸ ನಡೆಯುತ್ತಿದೆ.ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ.ಇಂತಹ ಸಮಕಾಲೀನ ವಿಚಾರಗಳನ್ನಿಟ್ಟುಕೊಂಡೇ ಕು.ಸ.ಮಧುಸೂದನರಂಗೇನಹಳ್ಳಿಯವರ ಕವಿತೆಗಳು ಸೃಷ್ಠಿಯಾಗಿವೆ.ಈಗಿನ ದುರಿತ ಕಾಲದ ವಿರುದ್ದ ಆರೋಗ್ಯಪೂರ್ಣ ದ್ವನಿ ಎತ್ತಿರುವ ಈ ಸಂಕಲನದ ಕವಿತೆಗಳಿಗೆ ವಿಶೇಷ ಮಹತ್ವವಿದೆ” ಎಂದು ನುಡಿದರು.
ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಕವಿಯಿತ್ರಿ ಶ್ರೀಮತಿ ಹೆಚ್.ಎಲ್.ಪುಷ್ಪಾ,ಪ್ರೊ.ವೃಷಭೇಂದ್ರಪ್ಪ. ಡಾ.ಪ್ರಕಾಶ್ ಹಲಗೇರಿ, ಪ್ರೊ, ಅರವಿಂದ್, ಡಾ,ಹೊನ್ನಾಳಿ ಶಿವಕುಮಾರ್, ಶ್ರೀ ಸಂತೇಬೆನ್ನೂರು ಫೈಜ್ನಾಟ್ರಾಜ್, ವೀರಭದ್ರಪ್ಪ ತೆಲಿಗಿ ಹಾಗು ಚಿತ್ರ ಕಲಾವಿದರಾದ ಶ್ರೀ ನಾಮದೇವ ಕಾಗದಕರ ಉಪಸ್ಥಿತರಿದ್ದರು
“ಸಂತೋಷ ಕೊಡುವ ಕಾಲದಲ್ಲಿ ನಾವು ಬದುಕುತ್ತಿಲ್ಲ ಅಸಹಿಷ್ಣುತೆ, ಭಯದ ಜೊತೆಗೆ ಉಸಿರುಗಟ್ಟುವ ವಾತಾವರಣದಲ್ಲಿ ಬದುಕುತ್ತಿದ್ದೇವೆ.ಸಂಸ್ಕೃತಿಯ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಹತ್ತಿಕ್ಕುವ ಕೆಲಸ ನಡೆಯುತ್ತಿದೆ.ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ.ಇಂತಹ ಸಮಕಾಲೀನ ವಿಚಾರಗಳನ್ನಿಟ್ಟುಕೊಂಡೇ ಕು.ಸ.ಮಧುಸೂದನರಂಗೇನಹಳ್ಳಿಯವರ ಕವಿತೆಗಳು ಸೃಷ್ಠಿಯಾಗಿವೆ.ಈಗಿನ ದುರಿತ ಕಾಲದ ವಿರುದ್ದ ಆರೋಗ್ಯಪೂರ್ಣ ದ್ವನಿ ಎತ್ತಿರುವ ಈ ಸಂಕಲನದ ಕವಿತೆಗಳಿಗೆ ವಿಶೇಷ ಮಹತ್ವವಿದೆ” ಎಂದು ನುಡಿದರು.
ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಕವಿಯಿತ್ರಿ ಶ್ರೀಮತಿ ಹೆಚ್.ಎಲ್.ಪುಷ್ಪಾ,ಪ್ರೊ.ವೃಷಭೇಂದ್ರಪ್ಪ. ಡಾ.ಪ್ರಕಾಶ್ ಹಲಗೇರಿ, ಪ್ರೊ, ಅರವಿಂದ್, ಡಾ,ಹೊನ್ನಾಳಿ ಶಿವಕುಮಾರ್, ಶ್ರೀ ಸಂತೇಬೆನ್ನೂರು ಫೈಜ್ನಾಟ್ರಾಜ್, ವೀರಭದ್ರಪ್ಪ ತೆಲಿಗಿ ಹಾಗು ಚಿತ್ರ ಕಲಾವಿದರಾದ ಶ್ರೀ ನಾಮದೇವ ಕಾಗದಕರ ಉಪಸ್ಥಿತರಿದ್ದರು
ಆಗ 29, 2018
ಆಗ 28, 2018
ಪ್ರೀತಿ
ಪ್ರವೀಣಕುಮಾರ್ ಗೋಣಿ
ಪ್ರೀತಿಸಿದಷ್ಟು ಪಡೆಯುತ್ತ ಹೋಗುವೆ
ದ್ವೇಷಿಸಿದಷ್ಟು ಕಳೆದುಕೊಳ್ಳುತ್ತಾ ಸಾಗುವೆ
ಸುಮ್ಮನೆ ಪ್ರೀತಿಸು ! ಅಕಾರಣವಾಗಿ ಪ್ರೀತಿಸು !
ಪ್ರೀತಿಯೊಂದೇ ಪವಿತ್ರವಾದುದ್ದು
ಪರಮ ಅರಿವಿನ ಹಾದಿಯದು ಪ್ರೀತಿ .
ಪ್ರೀತಿಸುತ್ತ ಪಾಮರತೆಯು ಸರಿವುದು
ಇರುಳು ಸರಿದು ಹಗಲು ಅರಳುವಂತೆ ,
ಪ್ರೀತಿಸುತ್ತಲೇ ಹೃದಯ ಅರಳುವುದು
ಮೊಗ್ಗುಗಳೆಲ್ಲ ಅರಳಿ ಪರಿಮಳವ ಬೀರುವಂತೆ .
ಆಗ 24, 2018
‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.
ದಿನಾಂಕ 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನ ಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಬಿಡುಗಡೆಗೊಳಿಸಲಿದ್ದಾರೆ.
ಕೃತಿಯ ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ
ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾರವರು (ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು,ಬೆಂಗಳೂರು) ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇಂದ್ರಪ್ಪ, ನಿರ್ದೇಶಕರು, ಬಾಪೂಜಿ ಇಂಜಿಯರಿಂಗ್ ಕಾಲೇಜು, ದಾವಣಗೆರೆ ಇವರು ವಹಿಸಲಿದ್ದಾರೆ.
ಕಾರ್ಯಕ್ರಮದ ವಿವರಗಳು
ಆಗ 19, 2018
ಪಕ್ಷಿ ಪ್ರಪಂಚ: ಕೆಂಬೂತ.
![]() |
ಚಿತ್ರ ೧: ಎಲೆಯೊಂದಿಗೆ ಕೆಂಬೂತ. |
ಕುಪ್ಪಳವೆಂದೂ ಕರೆಯಲ್ಪಡುವ ಈ ಪಕ್ಷಿ ರೆಕ್ಕೆಗೆ ಬಣ್ಣ ಬಳಿದುಕೊಂಡ ಕಾಗೆಯಂತೆ ಕಾಣಿಸುತ್ತದೆ!
ಆಂಗ್ಲ ಹೆಸರು: Crow pheasant (ಕ್ರೋ ಫೀಸೆಂಟ್)
Greater coucal (ಗ್ರೇಟರ್ ಕುಕೋಲ್)
Southern coucal (ಸದರ್ನ್ ಕುಕೋಲ್)
ವೈಜ್ಞಾನಿಕ ಹೆಸರು: Centropus sinensis (ಸೆಂಟ್ರೋಪಸ್ ಸಿನೆನ್ಸಿಸ್)
ಕಾಗೆಗಿಂತ ಕೊಂಚ ದೊಡ್ಡಕ್ಕಿರುವ ಕೆಂಬೂತಗಳನ್ನು ಅವುಗಳ ರೆಕ್ಕೆಯ ಬಣ್ಣದಿಂದ ಸುಲಭವಾಗಿ ಗುರುತಿಸಬಹುದು. ಕಪ್ಪು ತಲೆ, ಕಪ್ಪು - ಗಾಢ ನೀಲಿ/ನೇರಳೆ ಬಣ್ಣ ಮಿಶ್ರಿತ ಕತ್ತು - ಎದೆ - ದೇಹವನ್ನೊಂದಿರುವ ಕೆಂಬೂತಗಳ ರೆಕ್ಕೆಯ ಬಣ್ಣ ಕಂದು. ಅಗಲವಾದ ರೆಕ್ಕೆಗಳಿವಕ್ಕಿವೆ. ಕಪ್ಪು ಬಣ್ಣದ ಉದ್ದನೆಯ ಬಾಲದ ರೆಕ್ಕೆಗಳನ್ನಿವು ಹೊಂದಿವೆ. ಕಪ್ಪು ತಲೆಯಲ್ಲಿ ಕೆಂಪನೆಯ ಕಣ್ಣುಗಳು ಎದ್ದು ಕಾಣಿಸುತ್ತವೆ. ವಿಶಾಲ ರೆಕ್ಕೆಗಳಿದ್ದರೂ ಹಾರುವುದನ್ನು ಹೆಚ್ಚು ಇಷ್ಟಪಡದ ಪಕ್ಷಿಯಿದು. ಅಪಾಯದ ಸೂಚನೆ ಸಿಕ್ಕಾಗಷ್ಟೇ ಹಾರುತ್ತವೆ, ನಿಧಾನಗತಿಯಲ್ಲಿ. ಮಿಕ್ಕ ಸಮಯದಲ್ಲಿ ಘನ ಗಂಭೀರತೆಯಿಂದ ನಡೆದು ಹೋಗುವುದೇ ಕೆಂಬೂತಕ್ಕೆ ಪ್ರಿಯ. ನಡೆಯುವಿಕೆಯ ಮಧ್ಯೆ ಆಗಾಗ ಕುಪ್ಪಳಿಸುವುದರಿಂದ ಇದಕ್ಕೆ ಕುಪ್ಪಳವೆಂಬ ಹೆಸರು ಬಂದಿದೆ.
ಆಗ 14, 2018
ಏಕಕಾಲಕ್ಕೆ ಚುನಾವಣೆಗೆ ಬಾಜಪದ ಶಿಫಾರಸ್ಸು! ಯಾಕೆ ಮತ್ತು ಹೇಗೆ?
ಕು.ಸ.ಮಧುಸೂದನ ರಂಗೇನಹಳ್ಳಿ
ಅಂತೂ ವಿವಿದ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಪಂಡಿತರುಗಳ ವಿರೋಧಗಳ ನಡುವೆಯೂ ದೇಶದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ತನ್ನ ನಿಲುವಿಗೆ ಬದ್ದವಾಗಿರುವ ಬಾಜಪ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತೆ ಕಾಣುತ್ತಿದೆ. ಇದೀಗ ಅದು ಮುಂದಿನ ವರ್ಷದ ಮೇ ತಿಂಗಳಲ್ಲಿ ನಡೆಯಬಹುದಾದ ಲೋಕಸಭಾ ಚುನಾವಣೆಗಳ ಜೊತೆಗೆ ದೇಶದ ಇತರೆ ಹನ್ನೊಂದು ರಾಜ್ಯಗಳ ವಿದಾನಸಭೆಗಳಿಗೂ ಚುನಾವಣೆ ನಡೆಸುವ ಶಿಫಾರಸ್ಸೊಂದನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸುವ ಬಗ್ಗೆ ಚಿಂತಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಬಾಜಪದ ರಾಷ್ಟ್ರೀಯ ಅದ್ಯಕ್ಷರಾದ ಶ್ರೀ ಅಮಿತ್ ಷಾರವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದ್ದಾರೆ. ಇನ್ನು ಕೇಂದ್ರ ಸರಕಾರ ಅಧಿಕೃತವಾಗಿ ಈ ಬಗ್ಗೆ ಚುನಾವಣಾ ಅಯೋಗಕ್ಕೆ ಶಿಫಾರಸ್ಸು ಮಾಡುವ ಸಾದ್ಯತೆ ಹೆಚ್ಚಿದೆ.
ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಬೇಕಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ್, ಮಿಜೋರಾಂ ರಾಜ್ಯಗಳಲ್ಲಿ ಮುಂದಿನ ಮೆ ತಿಂಗಳವರೆಗು ರಾಜ್ಯಪಾಲರ ಆಡಳಿತವನ್ನು ಹೇರುವುದು. 2019ರ ಅಂತ್ಯಕ್ಕೆ ಅವಧಿ ಮುಗಿಯಲಿರುವ ತಮ್ಮದೇ ಆಡಳಿತ ಇರುವ ಮಹಾರಾಷ್ಟ್ರ,ಹರಿಯಾಣ, ಜಾರ್ಖಂಡ್ ರಾಜ್ಯಗಳ ಸರಕಾರಗಳನ್ನು ಅವಧಿಗೆ ಮುಂಚಿತವಾಗಿಯೇ ವಿದಾನಸಭೆ ವಿಸರ್ಜಿಸಿ ಲೋಕಸಭಾ ಚುನಾವಣೆಯ ಜೊತೆಗೆ ಸದರಿ ರಾಜ್ಯಗಳಿಗೂ ಚುನಾವಣೆ ನಡೆಸುವಂತೆ ಆಯೋಗವನ್ನು ಕೋರುವ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು. 2020ಕ್ಕೆ ಚುನಾವಣೆಗೆ ಹೋಗಬೇಕಿರುವ ಬಿಹಾರದಲ್ಲಿ ತಮ್ಮ ಮೈತ್ರಿ ಸರಕಾರದ ನೇತೃತ್ವ ವಹಿಸಿರುವ ಸಂಯುಕ್ತ ಜನತಾದಳದ ಶ್ರೀ ನಿತೀಶ್ ಕುಮಾರ್ ಅವರ ಮನವೊಲಿಸಿ ಬಿಹಾರದ ವಿದಾನಸಭೆಯನ್ನೂ ಅವಧಿಗೆ ಮುನ್ನವೇ ವಿಸರ್ಜಿಸಿ ಲೋಕಸಭೆಯ ಜೊತೆಗೇನೆ ಚುನಾವಣೆಗೆ ಹೋಗುವಂತೆ ಮಾಡುವುದು. ಅಲ್ಲಿಗೆ ತಮ್ಮ ಹಿಡಿತದಲ್ಲಿರುವ ಎಂಟು ರಾಜ್ಯಗಳನ್ನು ಚುನಾವಣೆಗೆ ಸಿದ್ದಪಡಿಸಿದಂತಾಗುತ್ತದೆ. ಇದರ ಜೊತೆಗೆ ಹೇಗಿದ್ದರೂ ಮುಂದಿನ ಮೇ ತಿಂಗಳ ಹೊತ್ತಿಗೆ ಸಹಜವಾಗಿಯೆ ಚುನಾವಣೆ ನಡೆಯಬೇಕಿರುವ ಆಂದ್ರ ಪ್ರದೇಶ, ತೆಲಂಗಾಣ, ಒಡಿಶ್ಸಾ ರಾಜ್ಯಗಳೂ ಸೇರಿಕೊಂಡರೆ ದೇಶದ ಮುವತ್ತು ರಾಜ್ಯಗಳ ಪೈಕಿ ಸುಮಾರು ಹನ್ನೊಂದು ರಾಜ್ಯಗಳು ಲೋಕಸಭೆಯ ಜೊತೆಗೆಯೇ ಚುನಾವಣೆ ಎದುರಿಸುವಂತಾಗುತ್ತದೆ. ಇದು ಸದ್ಯದಲ್ಲಿ ಬಾಜಪ ಮಾಡಲಿರುವ ಶಿಫಾರಸ್ಸಿನ ಹಿಂದಿರುವ ಚಾಣಾಕ್ಷ್ಯ ನಡೆಯಾಗಿದೆ.